ಆ ಭಾಗದ ರೈತರ ಕೃಷಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಿ, ಹೊಸದಾಗಿ ಬಡ್ಡಿ ರಹಿತ ಸಾಲ ನೀಡಬೇಕು. ರೈತರ ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಾಕಿಯನ್ನು ಕೂಡಲೇ ಪಾವತಿಸಬೇಕು. ಬೆಳೆ ವಿಮೆ ಪರಿಹಾರ, ಸಬ್ಸಿಡಿ ಹಣ ಸೇರಿ ಮೊದಲಾದವುಗಳನ್ನು ರೈತರ ಖಾತೆಗೆ ಕೂಡಲೇ ಜಮಾ ಮಾಡಬೇಕು. ಪ್ರವಾಹ ಪೀಡಿತ ಪ್ರದೇಶದ ವಿದ್ಯಾರ್ಥಿಗಳ ಶಾಲಾ-ಕಾಲೇಜು ಶುಲ್ಕವನ್ನು ಸರ್ಕಾರವೇ ಭರಿಸುವಂತೆ ಆಗ್ರಹಿಸಿ ಪ್ರತಿಭಟಿಸಲಾಗುವುದು’ ಎಂದು ನಾಗೇಂದ್ರ ತಿಳಿಸಿದರು.