ಮೈಸೂರು: ‘ಅಕ್ರಮ ನೇಮಕಾತಿ, ಚಿನ್ನದ ಲೇಪನದಲ್ಲಿ ಅವ್ಯವಹಾರ, ಸಿ.ಸಿ. ಟಿವಿ ಕ್ಯಾಮೆರಾ ಖರೀದಿಯಲ್ಲೂ ಅಕ್ರಮ, ಹಣ ದುರ್ಬಳಕೆ ಸೇರಿದಂತೆ ಹಲವು ಅಕ್ರಮಗಳನ್ನು ಎಸಗಿರುವ ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಅವರನ್ನು ಸೇವೆಯಿಂದ ವಜಾಗೊಳಿಸಿ, ಉನ್ನತ ಮಟ್ಟದ ತನಿಖೆ ನಡೆಸಬೇಕು’ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಚೋರನಹಳ್ಳಿ ಶಿವಣ್ಣ ಆಗ್ರಹಿಸಿದರು.