ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸ್ವಾಯತ್ತತೆಗಾಗಿನ ಹೋರಾಟ ಸಮಿತಿ ಸಂಚಾಲಕ ನಾ. ದಿವಾಕರ ಮಾತನಾಡಿ, ‘ಈ ಕುರಿತು ಈಗಾಗಲೇ ಎಲ್ಲ ಜನಪ್ರತಿನಿಧಿಗಳಿಗೂ ಲಿಖಿತವಾಗಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಭಾರತೀಯ ಭಾಷಾ ವಿಶ್ವವಿದ್ಯಾಲಯವನ್ನು ಶಿವಮೊಗ್ಗದಲ್ಲಿ ಸ್ಥಾಪಿಸುವ ಹುನ್ನಾರವೂ ನಡೆಯುತ್ತಿದೆ. ಇನ್ನಾದರೂ ಎಲ್ಲ ಸಾಹಿತಿಗಳು, ಸಂಘ, ಸಂಸ್ಥೆಗಳು, ಕನ್ನಡ ಸಾಹಿತ್ಯ ಪರಿಷತ್ತು, ರಾಜಕಾರಣಿಗಳು, ಕಲಾವಿದರು ಒಂದಾಗಿ ಮೈಸೂರಿನಲ್ಲೇ ಅಧ್ಯಯನ ಕೇಂದ್ರವನ್ನು ಉಳಿಸಿಕೊಳ್ಳಲು ಹೋರಾಟ ನಡೆಸಬೇಕಿದೆ’ ಎಂದು ಅಭಿಪ್ರಾಯಪಟ್ಟರು.