<p><strong>ಮೈಸೂರು: </strong>ಅಕ್ಷರ ದಾಸೋಹದ ಬಿಸಿಯೂಟ ತಯಾರಿಕರಿಗೆ 4 ತಿಂಗಳ ವೇತನ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಬಿಸಿಯೂಟ ತಯಾರಕರು ಕಳೆದ 17 ವರ್ಷಗಳಿಂದಲೂ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಕನಿಷ್ಠ ವೇತನ ಕಾಯ್ದೆಗೆ ಒಳಪಡದೇ ತೀರಾ ಕಡಿಮೆ ವೇತನ ಪಡೆಯುತ್ತಿದ್ದಾರೆ. ಈಗ ಇವರಿಗೆ ಕಳೆದ 4 ತಿಂಗಳುಗಳಿಂದಲೂ ವೇತನ ನೀಡಿಲ್ಲ. ಜೀವನ ನಿರ್ವಹಣೆಗೆ ಪರದಾಡುತ್ತಿದ್ದಾರೆ ಎಂದು ಕಾರ್ಯಕರ್ತರು ಕಿಡಿಕಾರಿದರು.</p>.<p>ಒಂದು ಕಡೆ ಶಾಲೆಗಳಲ್ಲಿ ಅಡುಗೆ ಕೆಲಸ ಇಲ್ಲ. ಮತ್ತೊಂದು ಕಡೆ ಕೂಲಿ ಕೆಲಸವೂ ಇಲ್ಲ. ಬೇರೆ ಅಸಂಘಟಿತ ಕಾರ್ಮಿಕರಿಗೆ ₹ 5 ಸಾವಿರ ಪರಿಹಾರ ನೀಡಲಾಯಿತು. ಆದರೆ, ಬಿಸಿಯೂಟ ತಯಾರಿಕರಿಗೆ ಯಾವುದೇ ಲಾಕ್ಡೌನ್ ಪರಿಹಾರ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸರ್ಕಾರ ಕೂಡಲೇ ವೇತನ ಬಿಡುಗಡೆ ಮಾಡಬೇಕು, ಲಾಕ್ಡೌನ್ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸಂಘಟನೆಯ ಮುಖಂಡರಾದ ಕೆ.ಜಿ.ಸೋಮರಾಜೇಅರಸ್, ವೈ.ಮಹದೇವಮ್ಮ, ಪದ್ಮಮ್ಮ, ಸಾವಿತ್ರಮ್ಮ, ಸರಸ್ವತಿ ಹಾಗೂ ಇತರರು ಇದ್ದರು.</p>.<p class="Briefhead"><strong>ಬಾಲಕಿ ಮೇಲಿನ ಅತ್ಯಾಚಾರಕ್ಕೆ ಖಂಡನೆ</strong></p>.<p><strong>ಮೈಸೂರು:</strong> ಧಾರವಾಡ ತಾಲ್ಲೂಕಿನಲ್ಲಿ ಈಚೆಗೆ ನಡೆದ ಬಾಲಕಿ ಮೇಲಿನ ಅತ್ಯಾಚಾರ ಘಟನೆಯನ್ನು ಗಂಧದ ಗುಡಿ ಫೌಂಡೇಷನ್ನ ಕಾರ್ಯಕರ್ತರು ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಖಂಡಿಸಿ, ಪ್ರತಿಭಟನೆ ನಡೆಸಿದರು.</p>.<p>ಇದೊಂದು ಅತ್ಯಂತ ಹೇಯ ಕೃತ್ಯ. ಆರೋಪಿಯ ಮೇಲೆ ಗುರುತರವಾದ ಪ್ರಕರಣಗಳನ್ನು ದಾಖಲಿಸಿ, ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದರು.</p>.<p>ಮತ್ತೆ ಇಂತಹ ಘಟನೆ ಸಂಭವಿಸದಂತೆ ಸರ್ಕಾರ ತಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.</p>.<p>ಸಂಘಟನೆಯ ಪದಾಧಿಕಾರಿಗಳಾದ ಆರ್ಯನ್, ಸುಧೀಂದ್ರ ಮಿಂಚು, ಮನೋಹರ್, ಸಂಜು, ಸಂತೋಷ್ ಹಾಗೂ ಇತರರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಅಕ್ಷರ ದಾಸೋಹದ ಬಿಸಿಯೂಟ ತಯಾರಿಕರಿಗೆ 4 ತಿಂಗಳ ವೇತನ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಬಿಸಿಯೂಟ ತಯಾರಕರು ಕಳೆದ 17 ವರ್ಷಗಳಿಂದಲೂ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಕನಿಷ್ಠ ವೇತನ ಕಾಯ್ದೆಗೆ ಒಳಪಡದೇ ತೀರಾ ಕಡಿಮೆ ವೇತನ ಪಡೆಯುತ್ತಿದ್ದಾರೆ. ಈಗ ಇವರಿಗೆ ಕಳೆದ 4 ತಿಂಗಳುಗಳಿಂದಲೂ ವೇತನ ನೀಡಿಲ್ಲ. ಜೀವನ ನಿರ್ವಹಣೆಗೆ ಪರದಾಡುತ್ತಿದ್ದಾರೆ ಎಂದು ಕಾರ್ಯಕರ್ತರು ಕಿಡಿಕಾರಿದರು.</p>.<p>ಒಂದು ಕಡೆ ಶಾಲೆಗಳಲ್ಲಿ ಅಡುಗೆ ಕೆಲಸ ಇಲ್ಲ. ಮತ್ತೊಂದು ಕಡೆ ಕೂಲಿ ಕೆಲಸವೂ ಇಲ್ಲ. ಬೇರೆ ಅಸಂಘಟಿತ ಕಾರ್ಮಿಕರಿಗೆ ₹ 5 ಸಾವಿರ ಪರಿಹಾರ ನೀಡಲಾಯಿತು. ಆದರೆ, ಬಿಸಿಯೂಟ ತಯಾರಿಕರಿಗೆ ಯಾವುದೇ ಲಾಕ್ಡೌನ್ ಪರಿಹಾರ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸರ್ಕಾರ ಕೂಡಲೇ ವೇತನ ಬಿಡುಗಡೆ ಮಾಡಬೇಕು, ಲಾಕ್ಡೌನ್ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸಂಘಟನೆಯ ಮುಖಂಡರಾದ ಕೆ.ಜಿ.ಸೋಮರಾಜೇಅರಸ್, ವೈ.ಮಹದೇವಮ್ಮ, ಪದ್ಮಮ್ಮ, ಸಾವಿತ್ರಮ್ಮ, ಸರಸ್ವತಿ ಹಾಗೂ ಇತರರು ಇದ್ದರು.</p>.<p class="Briefhead"><strong>ಬಾಲಕಿ ಮೇಲಿನ ಅತ್ಯಾಚಾರಕ್ಕೆ ಖಂಡನೆ</strong></p>.<p><strong>ಮೈಸೂರು:</strong> ಧಾರವಾಡ ತಾಲ್ಲೂಕಿನಲ್ಲಿ ಈಚೆಗೆ ನಡೆದ ಬಾಲಕಿ ಮೇಲಿನ ಅತ್ಯಾಚಾರ ಘಟನೆಯನ್ನು ಗಂಧದ ಗುಡಿ ಫೌಂಡೇಷನ್ನ ಕಾರ್ಯಕರ್ತರು ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಖಂಡಿಸಿ, ಪ್ರತಿಭಟನೆ ನಡೆಸಿದರು.</p>.<p>ಇದೊಂದು ಅತ್ಯಂತ ಹೇಯ ಕೃತ್ಯ. ಆರೋಪಿಯ ಮೇಲೆ ಗುರುತರವಾದ ಪ್ರಕರಣಗಳನ್ನು ದಾಖಲಿಸಿ, ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದರು.</p>.<p>ಮತ್ತೆ ಇಂತಹ ಘಟನೆ ಸಂಭವಿಸದಂತೆ ಸರ್ಕಾರ ತಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.</p>.<p>ಸಂಘಟನೆಯ ಪದಾಧಿಕಾರಿಗಳಾದ ಆರ್ಯನ್, ಸುಧೀಂದ್ರ ಮಿಂಚು, ಮನೋಹರ್, ಸಂಜು, ಸಂತೋಷ್ ಹಾಗೂ ಇತರರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>