‘ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ಅನಧಿಕೃತ ದೇಗುಲಗಳನ್ನು ತೆರವು ಮಾಡಬೇಕೆಂದು ಆದೇಶ ಹೊರಡಿಸಿದ್ದರು. ಅದರಂತೆ ಅಧಿಕಾರಿ ಗಳು ತೆರವಿಗೆ ಮುಂದಾಗಿದ್ದಾರೆ. ಇದೀಗ ತೆರವು ಮಾಡಿದ್ದನ್ನು ಬಿಜೆಪಿ ನಾಯಕರೇ ವಿರೋಧಿಸುತ್ತಿದ್ದಾರೆ. ದೇವಾಲಯ ನೆಲಸಮಗೊಳಿಸುವ, ಮತ್ತೆ ಕಟ್ಟುವುದರಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ದೇಶದಲ್ಲಿ ಧರ್ಮ ಆಧಾರಿತ ರಾಜಕಾರಣ ಮಾಡ ಬಾರದು’ ಎಂದು ಸಲಹೆ ನೀಡಿದರು.