ಮೈಸೂರು: ಇಲ್ಲಿನ ಪಾರಂಪರಿಕ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್ ಡೌನ್ ಕಟ್ಟಡಗಳನ್ನು ಸಂಪೂರ್ಣವಾಗಿ ತೆರವು ಗೊಳಿಸಿ ಈಗ ಇರುವ ಶೈಲಿಯಲ್ಲಿಯೇ ಮರು ನಿರ್ಮಾಣ ಮಾಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ತಿಳಿಸಿದರು.
ದೇವರಾಜ ಮಾರುಕಟ್ಟೆಗೆ ₹ 100 ಕೋಟಿ ಹಾಗೂ ಲ್ಯಾನ್ಸ್ ಡೌನ್ ಕಟ್ಟಡಕ್ಕೆ ₹ 45 ಕೋಟಿ ತೆಗೆದಿರಿಸಲಾಗಿದೆ. 2 ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದರು. ಪಾಲಿಕೆಯ ಮೇಯರ್ ಚುನಾವಣೆ ಸದ್ಯಕ್ಕೆ ನಡೆಯುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಕುಡಿಯುವ ನೀರಿನ ಯೋಜನೆ ಉದ್ಘಾಟನೆ:ಮೈಸೂರಿನ ವಿಜಯನಗರ 4ನೇ ಹಂತದ 8 ಸಾವಿರ ಕುಟುಂಬಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ಉದ್ಘಾಟಿಸಿದರು.
ಸಚಿವರಿಬ್ಬರುಶುಕ್ರವಾರ ನಗರದ ದೇವರಾಜ ಮಾರುಕಟ್ಟೆಗೆ ಭೇಟಿ ನೀಡಿಪರಿಶೀಲನೆ ನಡೆಸಿದರು.