ಭಕ್ತರು ಹುಣ್ಣಿಮೆಯ ದಿನ ಸ್ವಾಮಿಯ ದರ್ಶನ ಪಡೆದು, ಸೇವೆ ಸಲ್ಲಿಸುವುದು ಪ್ರತೀತಿ. ಕೊರೊನಾ ಸಂಕಷ್ಟದಿಂದ ಸರ್ಕಾರ ದೇವಾಲಯದಲ್ಲಿ ಹೆಚ್ಚಿನ ಜನ ಸೇರುವುದನ್ನು ತಡೆಯುವ ಸಲುವಾಗಿ ಹುಣ್ಣಿಮೆ ದಿನ ಭಕ್ತರು ದೇವಾಲಯ ಪ್ರವೇಶಿಸುವುದನ್ನು ನಿರ್ಬಂಧಿಸಿತ್ತು. ಆದರೂ ಗುರುವಾರ ಬೆಳಗಿನ ಜಾವ 5 ಗಂಟೆಯಿಂದಲೇ ಸಾವಿರಾರು ಭಕ್ತರು ಕಪಿಲಾ ನದಿಯಲ್ಲಿ ಪುಣ್ಯಸ್ನಾನ ಮಾಡಿ, ದೇವಾಲಯದ ಹೊರಗೆ ಧೂಪ, ದೀಪದ ಸೇವೆ, ಉರುಳು ಸೇವೆ, ಹರಕೆ ಮುಡಿ ಸಲ್ಲಿಸಿ ಭಕ್ತಿ ಮೆರೆದರು.