ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಪುನಶ್ಚೇತನಗೊಳಿಸಿದ ಚಿಕ್ಕಕೆರೆ ಗ್ರಾಮಸ್ಥರಿಗೆ ಹಸ್ತಾಂತರ

Last Updated 16 ಡಿಸೆಂಬರ್ 2021, 8:55 IST
ಅಕ್ಷರ ಗಾತ್ರ

ಮೈಸೂರು: ತಾಲ್ಲೂಕಿನ ಕರಕನಹಳ್ಳಿಯ ಚಿಕ್ಕಕೆರೆಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಅಭಿವೃದ್ಧಿಪಡಿಸಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಗುರುವಾರ ಗ್ರಾಮಸ್ಥರಿಗೆ ಹಸ್ತಾಂತರಿಸಿದರು.

ಇದಕ್ಕೂ ಮುನ್ನ ಅವರು ಕೆರೆಗೆ ಬಾಗಿನ ಅರ್ಪಿಸಿದರು.

4.34 ಎಕರೆ ವಿಸ್ತೀರ್ಣದ ಈ ಕೆರೆ ಕಳೆದ 20 ವರ್ಷಗಳಿಂದ ತುಂಬಿರಲಿಲ್ಲ. ಒಂದು ವರ್ಷದಲ್ಲಿ ಟ್ರಸ್ಟ್ ಈ ಕೆರೆಯನ್ನು ₹ 5.72 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದೆ. ಈ ಕೆರೆಯಿಂದ 150 ಕುಟುಂಬಗಳಿಗೆ ಪ್ರಯೋಜ‌ನವಾಗಿದ್ದು, 20 ಬೋರ್ ವೆಲ್ ಗಳು ಜಲಮರುಪೂರಣಗೊಂಡಿದೆ. ಸುಮಾರು 1 ಸಾವಿರ ಜಾನುವಾರುಗಳಿಗೆ ಕುಡಿಯಲು ಸಹಕಾರಿಯಾಗಿದೆ.

ಟ್ರಸ್ಟ್ ವತಿಯಿಂದ ಪುನಶ್ಚೇತನಗೊಳಿಸಿದ 299 ನೇ ಕೆರೆ ಇದಾಗಿದೆ. ಮೈಸೂರು ಜಿಲ್ಲೆಯಲ್ಲಿ ಒಟ್ಟು 30 ಕೆರೆಗಳನ್ನು ಒಂದು ವರ್ಷದಲ್ಲಿ ಪುನಶ್ಚೇತನಗೊಳಿಸಿದ್ದು, ಈಗ ಅವುಗಳೆಲ್ಲ ನೀರಿನಿಂದ ತುಂಬಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT