<p><strong>ಮೈಸೂರು: </strong>ರಾಜ್ಯ ಸರ್ಕಾರವು ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರೈತರ ಬೆನ್ನುಲುಬು ಮುರಿಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಆರ್.ಧ್ರುವನಾರಾಯಣ ಟೀಕಿಸಿದರು.</p>.<p>ಹೋರಾಟದ ಮೂಲಕ ಬಂದ ಬಿ.ಎಸ್.ಯಡಿಯೂರಪ್ಪ ಅವರಿಂದ ರೈತರ ಹಿತಾಸಕ್ತಿ ಬದಿಗಿರಿಸಿ ಕಾರ್ಪೋರೇಟ್ ವಲಯಕ್ಕೆ ಅನುಕೂಲ ಮಾಡಿಕೊಡುವಂತಹ ತಿದ್ದುಪಡಿಯನ್ನು ನಿರೀಕ್ಷಿರಲಿಲ್ಲ ಎಂದು ಅವರು ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>ವಿರೋಧ ಪಕ್ಷಗಳನ್ನು ಎದುರಿಸಲಾಗದ ಸರ್ಕಾರವು ಸುಗ್ರೀವಾಜ್ಞೆ ಮೂಲಕವೇ ತಿದ್ದುಪಡಿ ತಂದು ಪ್ರಜಾಪ್ರಭುತ್ವದ ಆಶಯಗಳನ್ನು ಗಾಳಿಗೆ ತೂರಿದೆ. ಈ ಕುರಿತು ಕೂಡಲೇ ತುರ್ತು ಅಧಿವೇಶನ ಕರೆದು ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು.</p>.<p>ಜನಸಂಖ್ಯೆ ಕಡಿಮೆ ಇರುವ ವಿದೇಶಗಳಲ್ಲಿಯಂತೆ ವಿಸ್ತಾರವಾದ ಭೂಮಿಯಲ್ಲಿ ಒಬ್ಬ ವ್ಯಕ್ತಿ ಕೃಷಿ ಮಾಡಲು ನಮ್ಮಲ್ಲಿ ಸಾಧ್ಯವಿಲ್ಲ. ರೈತರಿಂದ ಕೃಷಿ ಭೂಮಿಯನ್ನು ಕಿತ್ತುಕೊಂಡರೆ ಆಹಾರದ ಉತ್ಪಾದನೆಯಲ್ಲಿ ಇಳಿಮುಖವಾಗುತ್ತದೆ. ಸರ್ಕಾರ ಕೂಡಲೇ ತನ್ನ ಪ್ರಯತ್ನದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.</p>.<p>ಇದಕ್ಕೆ ಬದಲಾಗಿ ಕೃಷಿ ವಲಯದಲ್ಲಿ ಸಹಕಾರ ಸಂಘಗಳನ್ನು ಸ್ಥಾಪಿಸಬೇಕು, ಸಾವಯವ ಕೃಷಿಗೆ ಒತ್ತು ನೀಡಬೇಕು, ಯಡಿಯೂರಪ್ಪ ಅವರು ತಮ್ಮ ಹಿಂದಿನ ರೈತಪರ ಹೋರಾಟಗಳನ್ನು ಮರೆಯಬಾರದು ಎಂದು ಸಲಹೆ ನೀಡಿದರು.</p>.<p>ಕೇಂದ್ರ ಸರ್ಕಾರ ರಾಜ್ಯವನ್ನು ನಿರ್ಲಕ್ಷಿಸುತ್ತಿದ್ದರೂ ಒಬ್ಬ ಸಂಸದವರೂ ದನಿ ಎತ್ತುತ್ತಿಲ್ಲ. ಒಂದೆ ಒಂದು ನಿಯೋಗ ಕೇಂದ್ರವನ್ನು ಭೇಟಿ ಮಾಡಿಲ್ಲ ಎಂದು ಕಿಡಿಕಾರಿದರು.</p>.<p>ದಿನೇ ದಿನೇ ಹೆಚ್ಚುತ್ತಿರುವ ಇಂಧನ ಬೆಲೆ ವಿರೋಧಿಸಿ ಸದ್ಯದಲ್ಲೇ ಹೋರಾಟ ರೂಪಿಸಲಾಗುವುದು ಎಂದು ಅವರು ತಿಳಿಸಿದರು.</p>.<p>ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಪಕ್ಷದ ಮುಖಂಡರಾದ ಎಚ್.ಎ.ವೆಂಕಟೇಶ್, ರಘು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ರಾಜ್ಯ ಸರ್ಕಾರವು ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರೈತರ ಬೆನ್ನುಲುಬು ಮುರಿಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಆರ್.ಧ್ರುವನಾರಾಯಣ ಟೀಕಿಸಿದರು.</p>.<p>ಹೋರಾಟದ ಮೂಲಕ ಬಂದ ಬಿ.ಎಸ್.ಯಡಿಯೂರಪ್ಪ ಅವರಿಂದ ರೈತರ ಹಿತಾಸಕ್ತಿ ಬದಿಗಿರಿಸಿ ಕಾರ್ಪೋರೇಟ್ ವಲಯಕ್ಕೆ ಅನುಕೂಲ ಮಾಡಿಕೊಡುವಂತಹ ತಿದ್ದುಪಡಿಯನ್ನು ನಿರೀಕ್ಷಿರಲಿಲ್ಲ ಎಂದು ಅವರು ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>ವಿರೋಧ ಪಕ್ಷಗಳನ್ನು ಎದುರಿಸಲಾಗದ ಸರ್ಕಾರವು ಸುಗ್ರೀವಾಜ್ಞೆ ಮೂಲಕವೇ ತಿದ್ದುಪಡಿ ತಂದು ಪ್ರಜಾಪ್ರಭುತ್ವದ ಆಶಯಗಳನ್ನು ಗಾಳಿಗೆ ತೂರಿದೆ. ಈ ಕುರಿತು ಕೂಡಲೇ ತುರ್ತು ಅಧಿವೇಶನ ಕರೆದು ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು.</p>.<p>ಜನಸಂಖ್ಯೆ ಕಡಿಮೆ ಇರುವ ವಿದೇಶಗಳಲ್ಲಿಯಂತೆ ವಿಸ್ತಾರವಾದ ಭೂಮಿಯಲ್ಲಿ ಒಬ್ಬ ವ್ಯಕ್ತಿ ಕೃಷಿ ಮಾಡಲು ನಮ್ಮಲ್ಲಿ ಸಾಧ್ಯವಿಲ್ಲ. ರೈತರಿಂದ ಕೃಷಿ ಭೂಮಿಯನ್ನು ಕಿತ್ತುಕೊಂಡರೆ ಆಹಾರದ ಉತ್ಪಾದನೆಯಲ್ಲಿ ಇಳಿಮುಖವಾಗುತ್ತದೆ. ಸರ್ಕಾರ ಕೂಡಲೇ ತನ್ನ ಪ್ರಯತ್ನದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.</p>.<p>ಇದಕ್ಕೆ ಬದಲಾಗಿ ಕೃಷಿ ವಲಯದಲ್ಲಿ ಸಹಕಾರ ಸಂಘಗಳನ್ನು ಸ್ಥಾಪಿಸಬೇಕು, ಸಾವಯವ ಕೃಷಿಗೆ ಒತ್ತು ನೀಡಬೇಕು, ಯಡಿಯೂರಪ್ಪ ಅವರು ತಮ್ಮ ಹಿಂದಿನ ರೈತಪರ ಹೋರಾಟಗಳನ್ನು ಮರೆಯಬಾರದು ಎಂದು ಸಲಹೆ ನೀಡಿದರು.</p>.<p>ಕೇಂದ್ರ ಸರ್ಕಾರ ರಾಜ್ಯವನ್ನು ನಿರ್ಲಕ್ಷಿಸುತ್ತಿದ್ದರೂ ಒಬ್ಬ ಸಂಸದವರೂ ದನಿ ಎತ್ತುತ್ತಿಲ್ಲ. ಒಂದೆ ಒಂದು ನಿಯೋಗ ಕೇಂದ್ರವನ್ನು ಭೇಟಿ ಮಾಡಿಲ್ಲ ಎಂದು ಕಿಡಿಕಾರಿದರು.</p>.<p>ದಿನೇ ದಿನೇ ಹೆಚ್ಚುತ್ತಿರುವ ಇಂಧನ ಬೆಲೆ ವಿರೋಧಿಸಿ ಸದ್ಯದಲ್ಲೇ ಹೋರಾಟ ರೂಪಿಸಲಾಗುವುದು ಎಂದು ಅವರು ತಿಳಿಸಿದರು.</p>.<p>ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಪಕ್ಷದ ಮುಖಂಡರಾದ ಎಚ್.ಎ.ವೆಂಕಟೇಶ್, ರಘು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>