<p><strong>ಮೈಸೂರು</strong>: ‘ಕೊರೊನಾ ಸಂಕಷ್ಟದ ಸಮಯದಲ್ಲೂ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಸಾವಿನ ಮನೆಯಲ್ಲೂ ಭ್ರಷ್ಟಾಚಾರ ಮಾಡುತ್ತಿದೆ. ಇಲ್ಲಿರುವುದು ಭಂಡ ಸರ್ಕಾರ’ ಎಂದು ಕಾಂಗ್ರೆಸ್ ಮುಖಂಡ ಆರ್.ಧ್ರುವನಾರಾಯಣ ಟೀಕಿಸಿದರು.</p>.<p>ಕೊರೊನಾ ಸಂಕಷ್ಟದ ಸಮಯವನ್ನೇ ಲಾಭವಾಗಿ ಬಳಸಿಕೊಂಡು ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿದೆ. ಈಗ ಯಾರೂ ಬೀದಿಗಿಳಿದು ಪ್ರತಿಭಟನೆ ನಡೆಸುವಂತಿಲ್ಲ. ಉದ್ದೇಶಪೂರ್ವಕವಾಗಿ ಕೊರೊನಾ ಅವಧಿಯನ್ನೇ ಆಯ್ಕೆ ಮಾಡಿಕೊಂಡಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಬುಧವಾರ ಹರಿಹಾಯ್ದರು.</p>.<p>ಕಾಯ್ದೆ ತಿದ್ದುಪಡಿ ವಿರುದ್ಧ ಕಾಂಗ್ರೆಸ್ ಪಕ್ಷ ಮೊದಲ ದಿನದಿಂದಲೂ ಪ್ರತಿಭಟನೆ ನಡೆಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.</p>.<p>ಕ್ರಾಂತಿಕಾರಕ ಕಾಯ್ದೆಯ ತಿದ್ದುಪಡಿಗೆ ಮುನ್ನ ಸಾಕಷ್ಟು ಚರ್ಚೆ ಆಗಬೇಕಿತ್ತು. ರೈತ ಸಂಘಟನೆಗಳ ಅಭಿಪ್ರಾಯ ಪಡೆದುಕೊಳ್ಳಬೇಕಿತ್ತು. ಆದರೆ, ಈಗಿನ ಸರ್ಕಾರ ಯಾವುದೇ ಅಭಿಪ್ರಾಯಗಳಿಗೆ ಅವಕಾಶ ನೀಡುತ್ತಿಲ್ಲ. ವಿರೋಧ ಪಕ್ಷಗಳನ್ನು ಕಡೆಗಣಿಸುತ್ತಿದೆ ಎಂದು ದೂರಿದರು.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೂ ಮಾಫಿಯಾದವರ ಒತ್ತಡಕ್ಕೆ ಮಣಿದಿದ್ದಾರೆ. ಕೃಷಿಗೆ ಒತ್ತು ನೀಡಬೇಕಿದ್ದ ಸಮಯದಲ್ಲೇ ಈ ಕಾಯ್ದೆ ಜಾರಿಗೆ ತಂದಿರುವುದು ದುರದೃಷ್ಟಕರ ಎಂದರು.</p>.<p>‘ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಈ ಸಮಯದಲ್ಲಿ ಸರ್ಕಾರ ಬದ್ಧತೆಯಿಂದ ಕೆಲಸ ಮಾಡಬೇಕು. ಆದರೆ ಮನುಷ್ಯತ್ವವೇ ಇಲ್ಲದ ರೀತಿಯಲ್ಲಿ ವರ್ತಿಸುತ್ತಿರುವುದು ದುರದೃಷ್ಟಕರ. ಕೋವಿಡ್ನಿಂದ ಸಾಕಷ್ಟು ತೊಂದರೆ ಉಂಟಾಗಿದ್ದು, ಎಲ್ಲರೂ ಸರ್ಕಾರದ ಪರ ನಿಲ್ಲಬೇಕು ಎನ್ನುತ್ತಾರೆ. ಇವರು ನಡೆಸುತ್ತಿರುವ ಭ್ರಷ್ಟಾಚಾರವನ್ನು ನೋಡಿ ಸುಮ್ಮನಿರಬೇಕೇ’ ಎಂದು ಪ್ರಶ್ನಿಸಿದರು.</p>.<p>ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ಕಾಂಗ್ರೆಸ್ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಮುಖಂಡರಾದ ಶಿವಣ್ಣ, ಮಂಜುನಾಥ್, ಗೋಪಿನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಕೊರೊನಾ ಸಂಕಷ್ಟದ ಸಮಯದಲ್ಲೂ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಸಾವಿನ ಮನೆಯಲ್ಲೂ ಭ್ರಷ್ಟಾಚಾರ ಮಾಡುತ್ತಿದೆ. ಇಲ್ಲಿರುವುದು ಭಂಡ ಸರ್ಕಾರ’ ಎಂದು ಕಾಂಗ್ರೆಸ್ ಮುಖಂಡ ಆರ್.ಧ್ರುವನಾರಾಯಣ ಟೀಕಿಸಿದರು.</p>.<p>ಕೊರೊನಾ ಸಂಕಷ್ಟದ ಸಮಯವನ್ನೇ ಲಾಭವಾಗಿ ಬಳಸಿಕೊಂಡು ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿದೆ. ಈಗ ಯಾರೂ ಬೀದಿಗಿಳಿದು ಪ್ರತಿಭಟನೆ ನಡೆಸುವಂತಿಲ್ಲ. ಉದ್ದೇಶಪೂರ್ವಕವಾಗಿ ಕೊರೊನಾ ಅವಧಿಯನ್ನೇ ಆಯ್ಕೆ ಮಾಡಿಕೊಂಡಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಬುಧವಾರ ಹರಿಹಾಯ್ದರು.</p>.<p>ಕಾಯ್ದೆ ತಿದ್ದುಪಡಿ ವಿರುದ್ಧ ಕಾಂಗ್ರೆಸ್ ಪಕ್ಷ ಮೊದಲ ದಿನದಿಂದಲೂ ಪ್ರತಿಭಟನೆ ನಡೆಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.</p>.<p>ಕ್ರಾಂತಿಕಾರಕ ಕಾಯ್ದೆಯ ತಿದ್ದುಪಡಿಗೆ ಮುನ್ನ ಸಾಕಷ್ಟು ಚರ್ಚೆ ಆಗಬೇಕಿತ್ತು. ರೈತ ಸಂಘಟನೆಗಳ ಅಭಿಪ್ರಾಯ ಪಡೆದುಕೊಳ್ಳಬೇಕಿತ್ತು. ಆದರೆ, ಈಗಿನ ಸರ್ಕಾರ ಯಾವುದೇ ಅಭಿಪ್ರಾಯಗಳಿಗೆ ಅವಕಾಶ ನೀಡುತ್ತಿಲ್ಲ. ವಿರೋಧ ಪಕ್ಷಗಳನ್ನು ಕಡೆಗಣಿಸುತ್ತಿದೆ ಎಂದು ದೂರಿದರು.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೂ ಮಾಫಿಯಾದವರ ಒತ್ತಡಕ್ಕೆ ಮಣಿದಿದ್ದಾರೆ. ಕೃಷಿಗೆ ಒತ್ತು ನೀಡಬೇಕಿದ್ದ ಸಮಯದಲ್ಲೇ ಈ ಕಾಯ್ದೆ ಜಾರಿಗೆ ತಂದಿರುವುದು ದುರದೃಷ್ಟಕರ ಎಂದರು.</p>.<p>‘ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಈ ಸಮಯದಲ್ಲಿ ಸರ್ಕಾರ ಬದ್ಧತೆಯಿಂದ ಕೆಲಸ ಮಾಡಬೇಕು. ಆದರೆ ಮನುಷ್ಯತ್ವವೇ ಇಲ್ಲದ ರೀತಿಯಲ್ಲಿ ವರ್ತಿಸುತ್ತಿರುವುದು ದುರದೃಷ್ಟಕರ. ಕೋವಿಡ್ನಿಂದ ಸಾಕಷ್ಟು ತೊಂದರೆ ಉಂಟಾಗಿದ್ದು, ಎಲ್ಲರೂ ಸರ್ಕಾರದ ಪರ ನಿಲ್ಲಬೇಕು ಎನ್ನುತ್ತಾರೆ. ಇವರು ನಡೆಸುತ್ತಿರುವ ಭ್ರಷ್ಟಾಚಾರವನ್ನು ನೋಡಿ ಸುಮ್ಮನಿರಬೇಕೇ’ ಎಂದು ಪ್ರಶ್ನಿಸಿದರು.</p>.<p>ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ಕಾಂಗ್ರೆಸ್ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಮುಖಂಡರಾದ ಶಿವಣ್ಣ, ಮಂಜುನಾಥ್, ಗೋಪಿನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>