<p><strong>ಮೈಸೂರು</strong>: ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗಕಾಂಕ್ಷಿಗಳಿಗೆ ಮಾಹಿತಿ ತಂತ್ರಜ್ಞಾನದ ಅರಿವೂ ಇರಬೇಕು ಎಂದು ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್.ಮಹಾಬಲೇಶ್ವರ ತಿಳಿಸಿದರು.</p>.<p>ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸೋಮವಾರ ನಡೆದ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ಆನ್ಲೈನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸಾಂಪ್ರದಾಯಿಕವಾಗಿ ಬ್ಯಾಂಕುಗಳ ಇತಿಹಾಸ ಓದಿಕೊಂಡರೆ ನೇಮಕಾತಿ ಪರೀಕ್ಷೆಗಳಲ್ಲಿ ಯಶಸ್ಸು ಸಿಗುವುದು ಕಷ್ಟ. ಇದರ ಜತೆಗೆ, ಮಾಹಿತಿ ತಂತ್ರಜ್ಞಾನದ ಅರಿವನ್ನೂ ಹೊಂದಿರಬೇಕು ಎಂದು ಅವರು ಕಿವಿಮಾತು ಹೇಳಿದರು.</p>.<p>ಬ್ಯಾಂಕುಗಳಲ್ಲಿ ಡಿಜಿಟಲ್ ವ್ಯವಹಾರ ಹೆಚ್ಚಾಗುತ್ತಿರುವುದರಿಂದ ಬ್ಯಾಂಕುಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಇತ್ತೀಚೆಗೆ ನಡೆದಿರುವ ಬ್ಯಾಂಕುಗಳ ವಿಲೀನ ಇದಕ್ಕೆ ಸಾಕ್ಷಿ. ಆದಾಗ್ಯೂ, ದೇಶದಲ್ಲಿ ಉದ್ಯೋಗ ಸೃಷ್ಟಿಸುವಲ್ಲಿ ಬ್ಯಾಂಕಿಂಗ್ ಕ್ಷೇತ್ರ 2ನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಭಾರತೀಯ ಸೇನೆ ಇದ್ದರೆ, ಭಾರತೀಯ ರೈಲ್ವೆ3ನೇ ಸ್ಥಾನದಲ್ಲಿದೆ ಎಂದರು.</p>.<p>ಎಡಿಜಿಪಿ ಭಾಸ್ಕರ್ರಾವ್ ಮಾತನಾಡಿ, ‘ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವವರು ಇಂಟರ್ನೆಟ್ನಲ್ಲಿ ಎಲ್ಲವೂ ಸಿಗುತ್ತದೆ ಎಂದು ಸ್ವಯಂ ಅಧ್ಯಯನ ಕೈಗೊಂಡು ಎಡವುತ್ತಿದ್ದಾರೆ. ಆನ್ಲೈನ್ನಲ್ಲಿ ಮಾಹಿತಿ ದೊರೆತರೂ, ಕ್ರಮಬದ್ಧವಾದ ಅಧ್ಯಯನಕ್ಕೆ ಆಫ್ಲೈನ್ನಲ್ಲಿ ತರಬೇತಿ ಬೇಕೇ ಬೇಕು’ ಎಂದು ಹೇಳಿದರು.</p>.<p>ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಮೂಲಕ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.</p>.<p>ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಮಾತನಾಡಿ, ‘ಇಡೀ ವಿಶ್ವವಿದ್ಯಾಲಯವನ್ನು ಡಿಜಿಟಲೀಕರಣ ಮಾಡಲಾಗಿದೆ. ಪಿ.ಯು ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ತೆಗೆದುಕೊಳ್ಳುವ ಸಾಮಾನ್ಯ ಪರೀಕ್ಷೆಗೆ (ಕೆ-ಸಿಇಟಿ) ಆನ್ಲೈನ್ ತರಬೇತಿ ನೀಡಲು ನಿರ್ಧರಿಸಲಾಗಿದೆ’ ಎಂದರು.</p>.<p>ವಿದುಷಿ ಶ್ರೀರಂಜಿನಿವಿವೇಕ್, ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಎಂ.ಮಹದೇವನ್, ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗಕಾಂಕ್ಷಿಗಳಿಗೆ ಮಾಹಿತಿ ತಂತ್ರಜ್ಞಾನದ ಅರಿವೂ ಇರಬೇಕು ಎಂದು ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್.ಮಹಾಬಲೇಶ್ವರ ತಿಳಿಸಿದರು.</p>.<p>ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸೋಮವಾರ ನಡೆದ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ಆನ್ಲೈನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸಾಂಪ್ರದಾಯಿಕವಾಗಿ ಬ್ಯಾಂಕುಗಳ ಇತಿಹಾಸ ಓದಿಕೊಂಡರೆ ನೇಮಕಾತಿ ಪರೀಕ್ಷೆಗಳಲ್ಲಿ ಯಶಸ್ಸು ಸಿಗುವುದು ಕಷ್ಟ. ಇದರ ಜತೆಗೆ, ಮಾಹಿತಿ ತಂತ್ರಜ್ಞಾನದ ಅರಿವನ್ನೂ ಹೊಂದಿರಬೇಕು ಎಂದು ಅವರು ಕಿವಿಮಾತು ಹೇಳಿದರು.</p>.<p>ಬ್ಯಾಂಕುಗಳಲ್ಲಿ ಡಿಜಿಟಲ್ ವ್ಯವಹಾರ ಹೆಚ್ಚಾಗುತ್ತಿರುವುದರಿಂದ ಬ್ಯಾಂಕುಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಇತ್ತೀಚೆಗೆ ನಡೆದಿರುವ ಬ್ಯಾಂಕುಗಳ ವಿಲೀನ ಇದಕ್ಕೆ ಸಾಕ್ಷಿ. ಆದಾಗ್ಯೂ, ದೇಶದಲ್ಲಿ ಉದ್ಯೋಗ ಸೃಷ್ಟಿಸುವಲ್ಲಿ ಬ್ಯಾಂಕಿಂಗ್ ಕ್ಷೇತ್ರ 2ನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಭಾರತೀಯ ಸೇನೆ ಇದ್ದರೆ, ಭಾರತೀಯ ರೈಲ್ವೆ3ನೇ ಸ್ಥಾನದಲ್ಲಿದೆ ಎಂದರು.</p>.<p>ಎಡಿಜಿಪಿ ಭಾಸ್ಕರ್ರಾವ್ ಮಾತನಾಡಿ, ‘ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವವರು ಇಂಟರ್ನೆಟ್ನಲ್ಲಿ ಎಲ್ಲವೂ ಸಿಗುತ್ತದೆ ಎಂದು ಸ್ವಯಂ ಅಧ್ಯಯನ ಕೈಗೊಂಡು ಎಡವುತ್ತಿದ್ದಾರೆ. ಆನ್ಲೈನ್ನಲ್ಲಿ ಮಾಹಿತಿ ದೊರೆತರೂ, ಕ್ರಮಬದ್ಧವಾದ ಅಧ್ಯಯನಕ್ಕೆ ಆಫ್ಲೈನ್ನಲ್ಲಿ ತರಬೇತಿ ಬೇಕೇ ಬೇಕು’ ಎಂದು ಹೇಳಿದರು.</p>.<p>ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಮೂಲಕ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.</p>.<p>ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಮಾತನಾಡಿ, ‘ಇಡೀ ವಿಶ್ವವಿದ್ಯಾಲಯವನ್ನು ಡಿಜಿಟಲೀಕರಣ ಮಾಡಲಾಗಿದೆ. ಪಿ.ಯು ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ತೆಗೆದುಕೊಳ್ಳುವ ಸಾಮಾನ್ಯ ಪರೀಕ್ಷೆಗೆ (ಕೆ-ಸಿಇಟಿ) ಆನ್ಲೈನ್ ತರಬೇತಿ ನೀಡಲು ನಿರ್ಧರಿಸಲಾಗಿದೆ’ ಎಂದರು.</p>.<p>ವಿದುಷಿ ಶ್ರೀರಂಜಿನಿವಿವೇಕ್, ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಎಂ.ಮಹದೇವನ್, ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>