<p><strong>ಮೈಸೂರು: </strong>ನೇರ ವೇತನ ಪಾವತಿ ಮಾಡುವಂತೆ ಆಗ್ರಹಿಸಿ ನಗರ ಪಾಲಿಕೆಯ ಗುತ್ತಿಗೆ ಪೌರಕಾರ್ಮಿಕರು ಗುರುವಾರ ಸಾಂಕೇತಿಕವಾಗಿ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.</p>.<p>ಮೈಸೂರು ನಗರ ಪಾಲಿಕೆ ಕಾಯಂ ಪೌರಕಾರ್ಮಿಕರ ಹಾಗೂ ಗುತ್ತಿಗೆ ಪೌರಕಾರ್ಮಿಕರ ಮಹಾ ಸಂಘದ ವತಿಯಿಂದ ಪಾಲಿಕೆ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ 50 ಕ್ಕೂ ಅಧಿಕ ಪೌರಕಾರ್ಮಿಕರು ಪಾಲ್ಗೊಂಡರು.</p>.<p>ಪ್ರತಿಭಟನೆ ಅಂಗವಾಗಿ ಗುರುವಾರ ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿದರು. ಪಾಲಿಕೆಯಲ್ಲಿ 1,563 ಮಂದಿ ಗುತ್ತಿಗೆ ಪೌರಕಾರ್ಮಿಕರಿಗೆ ನೇರ ವೇತನ ಪಾವತಿ ಮಾಡುವಂತೆ ಜಿಲ್ಲಾಧಿಕಾರಿ ಅವರು ಕೌನ್ಸಿಲ್ ಅನುಮೋದನೆಯನ್ನು ಪಡೆದು ಆದೇಶಿಸಿದ್ದಾರೆ. ಆದೇಶ ಮಾಡಿ ಸುಮಾರು 4 ತಿಂಗಳು ಕಳೆದರೂ ವಿಳಂಬ ಧೋರಣೆ ಮಾಡುತ್ತಾ ಕಾಲಹರಣ ಮಾಡುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು.</p>.<p>ಈ ಕೂಡಲೇ ಕೌನ್ಸಿಲ್ ಸಭೆಯಲ್ಲಿ ಅನುಮೋದನೆಯನ್ನು ಪಡೆದು ಪೌರಕಾರ್ಮಿಕರಿಗೆ ನೇರ ವೇತನ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಎಲ್ಲಾ ಪೌರಕಾರ್ಮಿಕರು, ಒಳಚರಂಡಿ ಕಾರ್ಮಿಕರು, ಮನೆ ಮನೆ ಕಸ ಸಂಗ್ರಹಣೆ ಮಾಡುವ ಆಟೊ ಟಿಪ್ಪರ್ಗಳ ಚಾಲಕರು ಕೆಲಸ ಸ್ಥಗಿತಗೊಳಿಸಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.</p>.<p>ಮಾಜಿ ಮೇಯರ್ ನಾರಾಯಣ, ಸಂಘದ ಉನ್ನತ ಸಮಿತಿ ಅಧ್ಯಕ್ಷ ಎನ್.ಮಾರ, ಅಧ್ಯಕ್ಷ ಜಿ.ಮಹಾದೇವ, ಪದಾಧಿಕಾರಿಗಾದ ಶ್ರೀನಿವಾಸ್, ಆರ್.ಶಿವಣ್ಣ, ಆರ್ಮುಗಂ, ಎಸ್.ಎಂ.ಪಳನಿಸ್ವಾಮಿ ಪಾಲ್ಗೊಂಡಿದ್ದರು.</p>.<p class="Subhead">ಭೂಮಿ ಕಬಳಿಕೆ ಕೈಬಿಡುವಂತೆ ಆಗ್ರಹ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) ರೈತರ ಫಲವತ್ತಾದ ಭೂಮಿ ಕಬಳಿಸುವುದನ್ನು ಕೈಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮೈಸೂರು ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.</p>.<p>ಮುಡಾ ಆವರಣದಲ್ಲಿ ಸೇರಿದ ಪ್ರತಿಭಟನಕಾರರು ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರೈತರ ಭೂಮಿಯನ್ನು ಪಡೆದು ಬಡಾವಣೆ ನಿರ್ಮಿಸಲು ಹೊರಟಿರುವ ಅವರ ಕ್ರಮವನ್ನು ಖಂಡಿಸಿದರು.</p>.<p>ರೈತರ ಭೂಮಿ ಕಬಳಿಸುವ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು. ಮುಖ್ಯಮಂತ್ರಿ ಅವರು ದಸರಾ ಉದ್ಘಾಟನೆಗೆ ಬರುವ ಸಂದರ್ಭ ಕಪ್ಪುಬಾವುಟ ಪ್ರದರ್ಶಿಸಲಾಗುವುದು. ಮುಡಾ ಅಧ್ಯಕ್ಷರ ಮನೆಯ ಮುಂದೆ ಅನಿರ್ದಿಷ್ಟಾವಧಿ ಧರಣಿ ಮಾಡಲಾಗುವುದು ಎಂದು ಎಚ್ಚರಿಸಿದರು.</p>.<p>ಪ್ರತಿಭಟನಕಾರರು ಮುಡಾ ಅಧ್ಯಕ್ಷರ ಪ್ರತಿಕೃತಿ ಸುಡಲು ಮುಂದಾದಾಗ ಪೊಲೀಸರು ತಡೆದರು. ಈ ವೇಳೆ ಮಾತಿನ ಚಕಮಕಿ ನಡೆಯಿತು.</p>.<p>ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಗುರುಪ್ರಸಾದ್, ಪದಾಧಿಕಾರಿಗಳಾದ ಮಹದೇವು ಬಲ್ಲಹಳ್ಳಿ, ಶಿವಣ್ಣ, ಬಸವರಾಜ್, ಸಣ್ಣೇಗೌಡ ಇತರರು ಭಾಗವಹಿಸಿದ್ದರು.</p>.<p>ಒಡನಾಡಿಯಿಂದ ಪ್ರಾಯಶ್ಚಿತ್ತ ದಿವಸ</p>.<p>ಉತ್ತರ ಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತು ದೇಶದ ವಿವಿಧೆಡೆ ಮಹಿಳೆಯರು ಹಾಗೂ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಒಡನಾಡಿ ಸಂಸ್ಥೆಯ ವತಿಯಿಂದ ಗುರುವಾರ ‘ಪ್ರಾಯಶ್ಚಿತ್ತ ಹಾಗೂ ನಿರಾಹಾರ’ ದಿವಸ ಆಚರಿಸಲಾಯಿತು.</p>.<p>ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಪ್ರತಿಭಟನಕಾರರು ಕಪ್ಪು ಮಾಸ್ಕ್ ಧರಿಸಿ, ಭಿತ್ತಿಪತ್ರಗಳನ್ನು ಹಿಡಿದು ಮೌನಪ್ರತಿಭಟನೆ ನಡೆಸಿದರು. ಧರ್ಮ, ಜಾತಿ ಎಂಬ ಭೇದಭಾವ ತೋರದೆ ಇಂತಹ ಘಟನೆಯನ್ನು ಎಲ್ಲರೂ ಖಂಡಿಸಬೇಕು ಎಂದು ಮನವಿ ಮಾಡಿದರು.</p>.<p>ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ, ಪರಶು ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ನೇರ ವೇತನ ಪಾವತಿ ಮಾಡುವಂತೆ ಆಗ್ರಹಿಸಿ ನಗರ ಪಾಲಿಕೆಯ ಗುತ್ತಿಗೆ ಪೌರಕಾರ್ಮಿಕರು ಗುರುವಾರ ಸಾಂಕೇತಿಕವಾಗಿ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.</p>.<p>ಮೈಸೂರು ನಗರ ಪಾಲಿಕೆ ಕಾಯಂ ಪೌರಕಾರ್ಮಿಕರ ಹಾಗೂ ಗುತ್ತಿಗೆ ಪೌರಕಾರ್ಮಿಕರ ಮಹಾ ಸಂಘದ ವತಿಯಿಂದ ಪಾಲಿಕೆ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ 50 ಕ್ಕೂ ಅಧಿಕ ಪೌರಕಾರ್ಮಿಕರು ಪಾಲ್ಗೊಂಡರು.</p>.<p>ಪ್ರತಿಭಟನೆ ಅಂಗವಾಗಿ ಗುರುವಾರ ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿದರು. ಪಾಲಿಕೆಯಲ್ಲಿ 1,563 ಮಂದಿ ಗುತ್ತಿಗೆ ಪೌರಕಾರ್ಮಿಕರಿಗೆ ನೇರ ವೇತನ ಪಾವತಿ ಮಾಡುವಂತೆ ಜಿಲ್ಲಾಧಿಕಾರಿ ಅವರು ಕೌನ್ಸಿಲ್ ಅನುಮೋದನೆಯನ್ನು ಪಡೆದು ಆದೇಶಿಸಿದ್ದಾರೆ. ಆದೇಶ ಮಾಡಿ ಸುಮಾರು 4 ತಿಂಗಳು ಕಳೆದರೂ ವಿಳಂಬ ಧೋರಣೆ ಮಾಡುತ್ತಾ ಕಾಲಹರಣ ಮಾಡುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು.</p>.<p>ಈ ಕೂಡಲೇ ಕೌನ್ಸಿಲ್ ಸಭೆಯಲ್ಲಿ ಅನುಮೋದನೆಯನ್ನು ಪಡೆದು ಪೌರಕಾರ್ಮಿಕರಿಗೆ ನೇರ ವೇತನ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಎಲ್ಲಾ ಪೌರಕಾರ್ಮಿಕರು, ಒಳಚರಂಡಿ ಕಾರ್ಮಿಕರು, ಮನೆ ಮನೆ ಕಸ ಸಂಗ್ರಹಣೆ ಮಾಡುವ ಆಟೊ ಟಿಪ್ಪರ್ಗಳ ಚಾಲಕರು ಕೆಲಸ ಸ್ಥಗಿತಗೊಳಿಸಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.</p>.<p>ಮಾಜಿ ಮೇಯರ್ ನಾರಾಯಣ, ಸಂಘದ ಉನ್ನತ ಸಮಿತಿ ಅಧ್ಯಕ್ಷ ಎನ್.ಮಾರ, ಅಧ್ಯಕ್ಷ ಜಿ.ಮಹಾದೇವ, ಪದಾಧಿಕಾರಿಗಾದ ಶ್ರೀನಿವಾಸ್, ಆರ್.ಶಿವಣ್ಣ, ಆರ್ಮುಗಂ, ಎಸ್.ಎಂ.ಪಳನಿಸ್ವಾಮಿ ಪಾಲ್ಗೊಂಡಿದ್ದರು.</p>.<p class="Subhead">ಭೂಮಿ ಕಬಳಿಕೆ ಕೈಬಿಡುವಂತೆ ಆಗ್ರಹ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) ರೈತರ ಫಲವತ್ತಾದ ಭೂಮಿ ಕಬಳಿಸುವುದನ್ನು ಕೈಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮೈಸೂರು ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.</p>.<p>ಮುಡಾ ಆವರಣದಲ್ಲಿ ಸೇರಿದ ಪ್ರತಿಭಟನಕಾರರು ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರೈತರ ಭೂಮಿಯನ್ನು ಪಡೆದು ಬಡಾವಣೆ ನಿರ್ಮಿಸಲು ಹೊರಟಿರುವ ಅವರ ಕ್ರಮವನ್ನು ಖಂಡಿಸಿದರು.</p>.<p>ರೈತರ ಭೂಮಿ ಕಬಳಿಸುವ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು. ಮುಖ್ಯಮಂತ್ರಿ ಅವರು ದಸರಾ ಉದ್ಘಾಟನೆಗೆ ಬರುವ ಸಂದರ್ಭ ಕಪ್ಪುಬಾವುಟ ಪ್ರದರ್ಶಿಸಲಾಗುವುದು. ಮುಡಾ ಅಧ್ಯಕ್ಷರ ಮನೆಯ ಮುಂದೆ ಅನಿರ್ದಿಷ್ಟಾವಧಿ ಧರಣಿ ಮಾಡಲಾಗುವುದು ಎಂದು ಎಚ್ಚರಿಸಿದರು.</p>.<p>ಪ್ರತಿಭಟನಕಾರರು ಮುಡಾ ಅಧ್ಯಕ್ಷರ ಪ್ರತಿಕೃತಿ ಸುಡಲು ಮುಂದಾದಾಗ ಪೊಲೀಸರು ತಡೆದರು. ಈ ವೇಳೆ ಮಾತಿನ ಚಕಮಕಿ ನಡೆಯಿತು.</p>.<p>ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಗುರುಪ್ರಸಾದ್, ಪದಾಧಿಕಾರಿಗಳಾದ ಮಹದೇವು ಬಲ್ಲಹಳ್ಳಿ, ಶಿವಣ್ಣ, ಬಸವರಾಜ್, ಸಣ್ಣೇಗೌಡ ಇತರರು ಭಾಗವಹಿಸಿದ್ದರು.</p>.<p>ಒಡನಾಡಿಯಿಂದ ಪ್ರಾಯಶ್ಚಿತ್ತ ದಿವಸ</p>.<p>ಉತ್ತರ ಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತು ದೇಶದ ವಿವಿಧೆಡೆ ಮಹಿಳೆಯರು ಹಾಗೂ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಒಡನಾಡಿ ಸಂಸ್ಥೆಯ ವತಿಯಿಂದ ಗುರುವಾರ ‘ಪ್ರಾಯಶ್ಚಿತ್ತ ಹಾಗೂ ನಿರಾಹಾರ’ ದಿವಸ ಆಚರಿಸಲಾಯಿತು.</p>.<p>ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಪ್ರತಿಭಟನಕಾರರು ಕಪ್ಪು ಮಾಸ್ಕ್ ಧರಿಸಿ, ಭಿತ್ತಿಪತ್ರಗಳನ್ನು ಹಿಡಿದು ಮೌನಪ್ರತಿಭಟನೆ ನಡೆಸಿದರು. ಧರ್ಮ, ಜಾತಿ ಎಂಬ ಭೇದಭಾವ ತೋರದೆ ಇಂತಹ ಘಟನೆಯನ್ನು ಎಲ್ಲರೂ ಖಂಡಿಸಬೇಕು ಎಂದು ಮನವಿ ಮಾಡಿದರು.</p>.<p>ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ, ಪರಶು ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>