<p><strong>ಹುಣಸೂರು</strong>: ಜಾನುವಾರುಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡು ಮೇವು ತಿನ್ನದೆ ಅನಾರೋಗ್ಯಕ್ಕೆ ತುತ್ತಾಗುತ್ತಿವೆ ಎಂದು ಕಟ್ಟೆಮಳಲವಾಡಿ ಗ್ರಾಮದ ಕಿರಣ್ ಕುಮಾರ್ ಅಳಲು ತೋಡಿಕೊಂಡಿದ್ದಾರೆ.</p>.<p>ತಾಲ್ಲೂಕಿನ ಕಟ್ಟೆಮಳಲವಾಡಿ, ಕಲ್ಕುಣಿಕೆ, ಹೆಗ್ಗಂದೂರು, ಕಟ್ಟೆಮಳಲವಾಡಿ ಕೊಪ್ಪಲು ಸೇರಿದಂತೆ ಹಲವು ಗ್ರಾಮದ ಜಾನುವಾರುಗಳಿಗೆ ಚರ್ಮ ರೋಗ ಕಾಣಿಸಿಕೊಂಡಿದ್ದು, ಹಸು ಮತ್ತು ಎತ್ತುಗಳ ಮೈ ಮೇಲೆ ಗಂಟುಗಳು ಗೋಚರಿಸುತ್ತಿವೆ. ಈ ಜಾನುವಾರುಗಳು ಮೇವು ಬಿಟ್ಟು ಮಂಕಾಗಿ ದೈಹಿಕವಾಗಿ ಸೊರಗುತ್ತಿವೆ ಎಂದು ತಿಳಿಸಿದ್ದಾರೆ.</p>.<p>ಪಶುವೈದ್ಯ ಇಲಾಖೆಯವರು ಇದಕ್ಕೆ ಔಷಧ ಒದಗಿಸುತ್ತಿಲ್ಲ. ರೈತರು ಔಷಧಿ ಖರೀದಿಸಿ ನೀಡಬೇಕಾಗಿದೆ. ಪ್ರತಿ ಚುಚ್ಚುಮದ್ದಿಗೆ ಕನಿಷ್ಠ ₹250 ತಗಲುತ್ತಿದ್ದು, ಇಲಾಖೆ ಈ ಬಗ್ಗೆ ಗಮನ ನೀಡಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ತಾಲ್ಲೂಕು ಪಶುವೈದ್ಯಾಧಿಕಾರಿ ಲಿಂಗರಾಜು ದೊಡ್ಡಮನಿ, ‘ಜಾನುವಾರುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಗಂಟು ರೋಗ ವೈರಸ್ನಿಂದ ಹರಡುತ್ತದೆ. ಈ ರೋಗ ನಿಯಂತ್ರಣಕ್ಕೆ ಆ್ಯಂಟಿಬಯೋಟಿಕ್ ಚುಚ್ಚುಮದ್ದು ನೀಡಬೇಕಿದ್ದು, ಇಲಾಖೆಯಲ್ಲಿ ಲಭ್ಯವಿದೆ. ರೈತರು ಔಷಧ ಅಂಗಡಿಯಲ್ಲಿ ಖರೀದಿಸುವ ಅಗತ್ಯವಿಲ್ಲ’ ಎಂದು ತಿಳಿಸಿದರು.</p>.<p>ಈ ರೋಗ ತಾನಾಗೇ ನಿಲ್ಲಲಿದ್ದು, ರೋಗ ಕಾಣಿಸಿಕೊಂಡ ಜಾನುವಾರುಗಳನ್ನು ಪ್ರತ್ಯೇಕಿಸಿ ಕೊಟ್ಟಿಗೆಯಲ್ಲಿ ಕಟ್ಟಬೇಕು. ಇಲ್ಲವಾದಲ್ಲಿ ಇತರೆ ಜಾನುವಾರುಗಳಿಗೂ ಹರಡಲಿದೆ. ಈ ಬಗ್ಗೆ ಡಾ.ಭಾಸ್ಕರ್ ರೈತರಿಗೆ ಈಗಾಗಲೇ ಜಾಗೃತಿ ಮೂಡಿಸುವಲ್ಲಿ ತೊಡಗಿದ್ದಾರೆ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ಜಾನುವಾರುಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡು ಮೇವು ತಿನ್ನದೆ ಅನಾರೋಗ್ಯಕ್ಕೆ ತುತ್ತಾಗುತ್ತಿವೆ ಎಂದು ಕಟ್ಟೆಮಳಲವಾಡಿ ಗ್ರಾಮದ ಕಿರಣ್ ಕುಮಾರ್ ಅಳಲು ತೋಡಿಕೊಂಡಿದ್ದಾರೆ.</p>.<p>ತಾಲ್ಲೂಕಿನ ಕಟ್ಟೆಮಳಲವಾಡಿ, ಕಲ್ಕುಣಿಕೆ, ಹೆಗ್ಗಂದೂರು, ಕಟ್ಟೆಮಳಲವಾಡಿ ಕೊಪ್ಪಲು ಸೇರಿದಂತೆ ಹಲವು ಗ್ರಾಮದ ಜಾನುವಾರುಗಳಿಗೆ ಚರ್ಮ ರೋಗ ಕಾಣಿಸಿಕೊಂಡಿದ್ದು, ಹಸು ಮತ್ತು ಎತ್ತುಗಳ ಮೈ ಮೇಲೆ ಗಂಟುಗಳು ಗೋಚರಿಸುತ್ತಿವೆ. ಈ ಜಾನುವಾರುಗಳು ಮೇವು ಬಿಟ್ಟು ಮಂಕಾಗಿ ದೈಹಿಕವಾಗಿ ಸೊರಗುತ್ತಿವೆ ಎಂದು ತಿಳಿಸಿದ್ದಾರೆ.</p>.<p>ಪಶುವೈದ್ಯ ಇಲಾಖೆಯವರು ಇದಕ್ಕೆ ಔಷಧ ಒದಗಿಸುತ್ತಿಲ್ಲ. ರೈತರು ಔಷಧಿ ಖರೀದಿಸಿ ನೀಡಬೇಕಾಗಿದೆ. ಪ್ರತಿ ಚುಚ್ಚುಮದ್ದಿಗೆ ಕನಿಷ್ಠ ₹250 ತಗಲುತ್ತಿದ್ದು, ಇಲಾಖೆ ಈ ಬಗ್ಗೆ ಗಮನ ನೀಡಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ತಾಲ್ಲೂಕು ಪಶುವೈದ್ಯಾಧಿಕಾರಿ ಲಿಂಗರಾಜು ದೊಡ್ಡಮನಿ, ‘ಜಾನುವಾರುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಗಂಟು ರೋಗ ವೈರಸ್ನಿಂದ ಹರಡುತ್ತದೆ. ಈ ರೋಗ ನಿಯಂತ್ರಣಕ್ಕೆ ಆ್ಯಂಟಿಬಯೋಟಿಕ್ ಚುಚ್ಚುಮದ್ದು ನೀಡಬೇಕಿದ್ದು, ಇಲಾಖೆಯಲ್ಲಿ ಲಭ್ಯವಿದೆ. ರೈತರು ಔಷಧ ಅಂಗಡಿಯಲ್ಲಿ ಖರೀದಿಸುವ ಅಗತ್ಯವಿಲ್ಲ’ ಎಂದು ತಿಳಿಸಿದರು.</p>.<p>ಈ ರೋಗ ತಾನಾಗೇ ನಿಲ್ಲಲಿದ್ದು, ರೋಗ ಕಾಣಿಸಿಕೊಂಡ ಜಾನುವಾರುಗಳನ್ನು ಪ್ರತ್ಯೇಕಿಸಿ ಕೊಟ್ಟಿಗೆಯಲ್ಲಿ ಕಟ್ಟಬೇಕು. ಇಲ್ಲವಾದಲ್ಲಿ ಇತರೆ ಜಾನುವಾರುಗಳಿಗೂ ಹರಡಲಿದೆ. ಈ ಬಗ್ಗೆ ಡಾ.ಭಾಸ್ಕರ್ ರೈತರಿಗೆ ಈಗಾಗಲೇ ಜಾಗೃತಿ ಮೂಡಿಸುವಲ್ಲಿ ತೊಡಗಿದ್ದಾರೆ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>