ದಸರಾ ಉನ್ನತ ಮಟ್ಟದ ಸಮಿತಿ ಸೂಚಿಸಿದಂತೆ ಗಜಪಯಣವನ್ನು ಜನಪ್ರತಿನಿಧಿಗಳಿಗೆ ಆಹ್ವಾನ ನೀಡದೇ ಅಧಿಕಾರಿಗಳು ಮಾತ್ರವೇ ಸರಳವಾಗಿ ನಡೆಸಿದ್ದಾರೆ. ಇದರಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆಯಾಗಿಲ್ಲ. ಹುಣಸೂರು ತಾಲ್ಲೂಕು ಆಸ್ಪತ್ರೆ, ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. ಇದುವರೆಗೂ ಕ್ಷೇತ್ರದ ಅಭಿವೃದ್ಧಿ ಕುರಿತು ಯಾವುದೇ ಪತ್ರ ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.