ಪತ್ನಿಗೆ ಪ್ರತಿ ತಿಂಗಳು ₹3 ಸಾವಿರ ಜೀವನಾಂಶ ನೀಡುವಂತೆ ಇಲ್ಲಿನ 2ನೇ ಕೌಟುಂಬಿಕ ನ್ಯಾಯಾಲಯ ಆದೇಶಿಸಿತ್ತು. ಜೀವನಾಂಶ ಸರಿಯಾಗಿ ದೊರೆಯದ ಕಾರಣ ಗೀತಾ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ 2ನೇ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಎಚ್.ಎಂ.ವಿರೂಪಾಕ್ಷಯ್ಯ, ಲೋಕ ಅದಾಲತ್ನಲ್ಲಿ ದಂಪತಿಯನ್ನು ಮತ್ತೆ ಒಂದುಗೂಡಿಸಲು ಪ್ರಯತ್ನಿಸಿ ಯಶಸ್ವಿಯಾದರು.