ನಾಳೆ ಸಭೆ: ಸಂಘದ ಪದಾಧಿಕಾರಿಗಳ ಸಭೆಯು ಆ.23ರಂದು ನಡೆಯುವ ಸಾಧ್ಯತೆ ಇದ್ದು, ರಾಜ್ಯವ್ಯಾಪಿ ಮುಷ್ಕರಕ್ಕೆ ಕರೆ ನೀಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ಶ್ರೀನಿವಾಸ್
ಈಗಾಗಲೇ ತಿಳಿಸಿದ್ದಾರೆ. ಹೀಗಾಗಿ, ಸೋಮವಾರದಿಂದ ಇಡೀ ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಘಟಕಗಳು, ಆರೋಗ್ಯ ಕೇಂದ್ರಗಳಲ್ಲಿ
ವೈದ್ಯಕೀಯ ಸೇವೆ ವ್ಯತ್ಯಯವಾಗುವ ಸಂಭವ ಇದೆ.