<p><strong>ಮೈಸೂರು:</strong> ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಸೆ. 15ರಿಂದಲೇ ಭಾಗಶಃ ಮುಷ್ಕರಕ್ಕೆ ಕರೆ ನೀಡಿದೆ.</p>.<p>ಸರ್ಕಾರಕ್ಕೆ ಸಲ್ಲಿಸುತ್ತಿದ್ದ ವಿವಿಧ ಕಾರ್ಯಕ್ರಮಗಳ ಅನುಷ್ಠಾನದ ಕುರಿತ ವರದಿಯನ್ನು ಸಲ್ಲಿಸದೇ ಇರಲು ಸಂಘ ತೀರ್ಮಾನಿಸಿದೆ. ಜತೆಗೆ, ಸೆ. 21ರಿಂದ ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.</p>.<p>ಸಂಘದ ಜಿಲ್ಲಾಶಾಖೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಿದರು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಡಾ.ದೇವಿ ಆನಂದ್, ‘ವೈದ್ಯರ ವೇತನವನ್ನು ಹೆಚ್ಚಳ ಮಾಡಬೇಕು, 3 ವರ್ಷ ಸೇವೆ ಸಲ್ಲಿಸಿದ ಎಲ್ಲ ವೈದ್ಯರನ್ನು ಕಾಯಂಗೊಳಿಸಬೇಕು, ತಮಿಳುನಾಡು ರಾಜ್ಯದ ಮಾದರಿಯಂತೆ ದಿನಕ್ಕೆ 8 ಗಂಟೆ ಅವಧಿಯ ಪಾಳಿಯನ್ನು ಅಳವಡಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘದ ರಾಜ್ಯಮಟ್ಟದ ಕಾರ್ಯಕಾರಿ ಸಮಿತಿಯ ತೀರ್ಮಾನದಂತೆ ರಾಜ್ಯದೆಲ್ಲೆಡೆ ಪ್ರತಿಭಟನೆಗೆ ಕರೆ ನೀಡಲಾಗಿದೆ. ಕಳೆದ ತಿಂಗಳು 15ರಂದೇ ಈ ಕುರಿತ ವಿವರವಾದ ಮನವಿಪತ್ರ ನೀಡಲಾಗಿತ್ತು. ಆದರೆ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ ಮುಷ್ಕರದಂತಹ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಸೆ. 15ರಿಂದಲೇ ಭಾಗಶಃ ಮುಷ್ಕರಕ್ಕೆ ಕರೆ ನೀಡಿದೆ.</p>.<p>ಸರ್ಕಾರಕ್ಕೆ ಸಲ್ಲಿಸುತ್ತಿದ್ದ ವಿವಿಧ ಕಾರ್ಯಕ್ರಮಗಳ ಅನುಷ್ಠಾನದ ಕುರಿತ ವರದಿಯನ್ನು ಸಲ್ಲಿಸದೇ ಇರಲು ಸಂಘ ತೀರ್ಮಾನಿಸಿದೆ. ಜತೆಗೆ, ಸೆ. 21ರಿಂದ ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.</p>.<p>ಸಂಘದ ಜಿಲ್ಲಾಶಾಖೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಿದರು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಡಾ.ದೇವಿ ಆನಂದ್, ‘ವೈದ್ಯರ ವೇತನವನ್ನು ಹೆಚ್ಚಳ ಮಾಡಬೇಕು, 3 ವರ್ಷ ಸೇವೆ ಸಲ್ಲಿಸಿದ ಎಲ್ಲ ವೈದ್ಯರನ್ನು ಕಾಯಂಗೊಳಿಸಬೇಕು, ತಮಿಳುನಾಡು ರಾಜ್ಯದ ಮಾದರಿಯಂತೆ ದಿನಕ್ಕೆ 8 ಗಂಟೆ ಅವಧಿಯ ಪಾಳಿಯನ್ನು ಅಳವಡಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘದ ರಾಜ್ಯಮಟ್ಟದ ಕಾರ್ಯಕಾರಿ ಸಮಿತಿಯ ತೀರ್ಮಾನದಂತೆ ರಾಜ್ಯದೆಲ್ಲೆಡೆ ಪ್ರತಿಭಟನೆಗೆ ಕರೆ ನೀಡಲಾಗಿದೆ. ಕಳೆದ ತಿಂಗಳು 15ರಂದೇ ಈ ಕುರಿತ ವಿವರವಾದ ಮನವಿಪತ್ರ ನೀಡಲಾಗಿತ್ತು. ಆದರೆ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ ಮುಷ್ಕರದಂತಹ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>