ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಡಾ.ದೇವಿ ಆನಂದ್, ‘ವೈದ್ಯರ ವೇತನವನ್ನು ಹೆಚ್ಚಳ ಮಾಡಬೇಕು, 3 ವರ್ಷ ಸೇವೆ ಸಲ್ಲಿಸಿದ ಎಲ್ಲ ವೈದ್ಯರನ್ನು ಕಾಯಂಗೊಳಿಸಬೇಕು, ತಮಿಳುನಾಡು ರಾಜ್ಯದ ಮಾದರಿಯಂತೆ ದಿನಕ್ಕೆ 8 ಗಂಟೆ ಅವಧಿಯ ಪಾಳಿಯನ್ನು ಅಳವಡಿಸಬೇಕು’ ಎಂದು ಒತ್ತಾಯಿಸಿದರು.