<p><strong>ಸರಗೂರು (ಮೈಸೂರು):</strong> ‘ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಭಾಷಾ ಮಾಧ್ಯಮಕ್ಕೆ ಯಾವುದೇ ರೀತಿಯ ಹೊಡೆತ ಬೀಳಲ್ಲ. ಈ ಬಗ್ಗೆ ಆತಂಕ ಪಡುವ ಅಗತ್ಯವೂ ಇಲ್ಲ’ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಭಾನುವಾರ ಇಲ್ಲಿ ಪ್ರತಿಕ್ರಿಯಿಸಿದರು.</p>.<p>ಕೋವಿಡ್ ಆರೈಕೆ ಕೇಂದ್ರ ಉದ್ಘಾಟಿಸಿದ ಬಳಿಕ ಮಾಧ್ಯಮದವರೊಟ್ಟಿಗೆ ಮಾತನಾಡಿದ ಅವರು, ‘ನಮ್ಮತನ, ಸಂಸ್ಕೃತಿ, ಆಚಾರ–ವಿಚಾರ, ಭಾಷೆಯನ್ನು ಸಂರಕ್ಷಿಸಿ–ಬೆಳೆಸುವುದೇ ರಾಷ್ಟ್ರೀಯ ಶಿಕ್ಷಣ ನೀತಿಯ ಧ್ಯೇಯೋದ್ದೇಶವಾಗಿದೆ’ ಎಂದು ಅವರು ತಿಳಿಸಿದರು.</p>.<p>‘2021–22ನೇ ಶೈಕ್ಷಣಿಕ ಸಾಲಿನಲ್ಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಕ್ರಮ ವಹಿಸಿದೆ. ಇದಕ್ಕಾಗಿಯೇ ರಾಜ್ಯದಲ್ಲಿನ ಎಲ್ಲ ವಿಶ್ವವಿದ್ಯಾನಿಲಯಗಳ ಕುಲಪತಿಗಳನ್ನೊಳಗೊಂಡ ಸಮಿತಿ ರಚಿಸಿದ್ದು, ಈ ತಿಂಗಳ ಅಂತ್ಯದೊಳಗೆ ಯಾವ ರೀತಿ ಅನುಷ್ಠಾನಗೊಳಿಸಬೇಕು ಎಂಬ ವರದಿ ನೀಡುವಂತೆ ಸೂಚನೆ ನೀಡಲಾಗಿದೆ’ ಎಂದು ಅಶ್ವಥನಾರಾಯಣ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಮೂರೂವರೆ ದಶಕದ ಬಳಿಕ ಮೂರನೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಲಾಗಿದೆ. ಇದಕ್ಕಾಗಿ ಶಿಕ್ಷಣ ತಜ್ಞರು ಐದೂವರೆ ವರ್ಷ ಸಮಯ ತೆಗೆದುಕೊಂಡಿದ್ದಾರೆ. ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸುವುದರಿಂದ ಶೈಕ್ಷಣಿಕ ಬದಲಾವಣೆ, ಸುಧಾರಣೆ ತರಬಹುದು’ ಎಂದು ಸಚಿವರು ಹೇಳಿದರು.</p>.<p>7,500 ಸಿಬ್ಬಂದಿ ನೇಮಕ: ‘ಕೋವಿಡ್ನ ಸಂಭಾವ್ಯ ಮೂರನೇ ಅಲೆ ತಡೆಗಟ್ಟಲು ಹಲವು ಕ್ರಮ ತೆಗೆದುಕೊಳ್ಳಲಾಗುತ್ತಿದೆ. 7,500 ವೈದ್ಯಕೀಯ ಸಿಬ್ಬಂದಿ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು’ ಎಂದು ಅಶ್ವಥನಾರಾಯಣ ತಿಳಿಸಿದರು.</p>.<p>‘ಮೂರನೇ ಅಲೆ ಎದುರಾಗುವ ಹೊತ್ತಿಗೆ ಎಲ್ಲ ತಾಲ್ಲೂಕು–ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕದ ಜನರೇಟರ್, ಸಾಂದ್ರಕ ಹಾಗೂ ಸಂಗ್ರಹಣ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲಾಗುವುದು. ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ವ್ಯವಸ್ಥೆಗಳನ್ನು ಸುಧಾರಿಸುತ್ತೇವೆ. ಕುಗ್ರಾಮದಲ್ಲೂ ವೈದ್ಯಕೀಯ ಸೇವೆ ಲಭಿಸುವಂತೆ ನೋಡಿಕೊಳ್ಳುತ್ತೇವೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸರಗೂರು (ಮೈಸೂರು):</strong> ‘ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಭಾಷಾ ಮಾಧ್ಯಮಕ್ಕೆ ಯಾವುದೇ ರೀತಿಯ ಹೊಡೆತ ಬೀಳಲ್ಲ. ಈ ಬಗ್ಗೆ ಆತಂಕ ಪಡುವ ಅಗತ್ಯವೂ ಇಲ್ಲ’ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಭಾನುವಾರ ಇಲ್ಲಿ ಪ್ರತಿಕ್ರಿಯಿಸಿದರು.</p>.<p>ಕೋವಿಡ್ ಆರೈಕೆ ಕೇಂದ್ರ ಉದ್ಘಾಟಿಸಿದ ಬಳಿಕ ಮಾಧ್ಯಮದವರೊಟ್ಟಿಗೆ ಮಾತನಾಡಿದ ಅವರು, ‘ನಮ್ಮತನ, ಸಂಸ್ಕೃತಿ, ಆಚಾರ–ವಿಚಾರ, ಭಾಷೆಯನ್ನು ಸಂರಕ್ಷಿಸಿ–ಬೆಳೆಸುವುದೇ ರಾಷ್ಟ್ರೀಯ ಶಿಕ್ಷಣ ನೀತಿಯ ಧ್ಯೇಯೋದ್ದೇಶವಾಗಿದೆ’ ಎಂದು ಅವರು ತಿಳಿಸಿದರು.</p>.<p>‘2021–22ನೇ ಶೈಕ್ಷಣಿಕ ಸಾಲಿನಲ್ಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಕ್ರಮ ವಹಿಸಿದೆ. ಇದಕ್ಕಾಗಿಯೇ ರಾಜ್ಯದಲ್ಲಿನ ಎಲ್ಲ ವಿಶ್ವವಿದ್ಯಾನಿಲಯಗಳ ಕುಲಪತಿಗಳನ್ನೊಳಗೊಂಡ ಸಮಿತಿ ರಚಿಸಿದ್ದು, ಈ ತಿಂಗಳ ಅಂತ್ಯದೊಳಗೆ ಯಾವ ರೀತಿ ಅನುಷ್ಠಾನಗೊಳಿಸಬೇಕು ಎಂಬ ವರದಿ ನೀಡುವಂತೆ ಸೂಚನೆ ನೀಡಲಾಗಿದೆ’ ಎಂದು ಅಶ್ವಥನಾರಾಯಣ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಮೂರೂವರೆ ದಶಕದ ಬಳಿಕ ಮೂರನೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಲಾಗಿದೆ. ಇದಕ್ಕಾಗಿ ಶಿಕ್ಷಣ ತಜ್ಞರು ಐದೂವರೆ ವರ್ಷ ಸಮಯ ತೆಗೆದುಕೊಂಡಿದ್ದಾರೆ. ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸುವುದರಿಂದ ಶೈಕ್ಷಣಿಕ ಬದಲಾವಣೆ, ಸುಧಾರಣೆ ತರಬಹುದು’ ಎಂದು ಸಚಿವರು ಹೇಳಿದರು.</p>.<p>7,500 ಸಿಬ್ಬಂದಿ ನೇಮಕ: ‘ಕೋವಿಡ್ನ ಸಂಭಾವ್ಯ ಮೂರನೇ ಅಲೆ ತಡೆಗಟ್ಟಲು ಹಲವು ಕ್ರಮ ತೆಗೆದುಕೊಳ್ಳಲಾಗುತ್ತಿದೆ. 7,500 ವೈದ್ಯಕೀಯ ಸಿಬ್ಬಂದಿ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು’ ಎಂದು ಅಶ್ವಥನಾರಾಯಣ ತಿಳಿಸಿದರು.</p>.<p>‘ಮೂರನೇ ಅಲೆ ಎದುರಾಗುವ ಹೊತ್ತಿಗೆ ಎಲ್ಲ ತಾಲ್ಲೂಕು–ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕದ ಜನರೇಟರ್, ಸಾಂದ್ರಕ ಹಾಗೂ ಸಂಗ್ರಹಣ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲಾಗುವುದು. ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ವ್ಯವಸ್ಥೆಗಳನ್ನು ಸುಧಾರಿಸುತ್ತೇವೆ. ಕುಗ್ರಾಮದಲ್ಲೂ ವೈದ್ಯಕೀಯ ಸೇವೆ ಲಭಿಸುವಂತೆ ನೋಡಿಕೊಳ್ಳುತ್ತೇವೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>