<p>ಹನಗೋಡು: ಹೋಬಳಿ ವ್ಯಾಪ್ತಿಯಲ್ಲಿ ಚಿರತೆ ದಾಳಿಗೆ ಕುರಿಗಳು ನಿರಂತರವಾಗಿ ಬಲಿಯಾಗುತ್ತಿವುದರಿಂದ ಆತಂಕಕ್ಕೊಳಗಾಗಿರುವ ರೈತರಿಗೆ ಈಗ ನಾಯಿಗಳ ಕಾಟದಿಂದಾಗಿ ಇನ್ನಷ್ಟು ಆತಂಕಕ್ಕೊಳಗಾಗಿದ್ದಾರೆ.</p>.<p>ಹೋಬಳಿಯ ಕಣಗಾಲು ಗ್ರಾಮದಲ್ಲಿ ಮಂಗಳವಾರ ಬೀದಿನಾಯಿಗಳ ದಾಳಿಗೆ ಗ್ರಾಮದ ಕೆ.ಪಿ.ನಾಗೇಗೌಡ ಅವರಿಗೆ ಸೇರಿದ 10 ಕುರಿಗಳು ಬಲಿಯಾಗಿವೆ.</p>.<p>ನಾಗೇಗೌಡ ಅವರು ಪಕ್ಕದ ಜಮೀನಿಗೆ ಕೆಲಸಕ್ಕಾಗಿ ತೆರಳಿದ್ದ ವೇಳೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ಕೊಟ್ಟಿಗೆಗೆ ನುಗ್ಗಿ ಕುರಿಗಳನ್ನು ಕಚ್ಚಿ ಸಾಯಿಸಿವೆ. ಸುಮಾರು ₹ 1 ಲಕ್ಷ ಮೌಲ್ಯದ ಕುರಿಗಳು ಮೃತಪಟ್ಟಿವೆ ಎಂದು ಅವರು ತಿಳಿಸಿದ್ದಾರೆ.</p>.<p>ಅರಸು ಕಲ್ಲಹಳ್ಳಿ ಪಶುವೈದ್ಯ ಆಸ್ಪತ್ರೆಯ ಡಾ.ಶರತ್ಕುಮಾರ್ ಕುರಿಗಳ ಶವ ಪರೀಕ್ಷೆ ನಡೆಸಿ, ಪರಿಹಾರಕ್ಕೆ ಅರ್ಜಿ ಸಲ್ಲಿಸುವಂತೆ ಸಲಹೆ ನೀಡಿದರು.</p>.<p>ಇತ್ತೀಚಿಗೆ ಗ್ರಾಮದಲ್ಲಿ ಬೀದಿನಾಯಿ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರು ರಾತ್ರಿ ಸಮಯದಲ್ಲಿ ಓಡಾಡದ ಸ್ಥಿತಿ ನಿರ್ಮಾಣವಾಗಿದೆ. ಹಸು,ಕುರಿ ಮೇಕೆಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡುತ್ತಿದ್ದು ನಾಯಿಗಳನ್ನು ಗ್ರಾಮ ಪಂಚಾಯಿತಿಯವರು ಹಿಡಿದು ಬೇರೆಡೆಗೆ ಸಾಗಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹನಗೋಡು: ಹೋಬಳಿ ವ್ಯಾಪ್ತಿಯಲ್ಲಿ ಚಿರತೆ ದಾಳಿಗೆ ಕುರಿಗಳು ನಿರಂತರವಾಗಿ ಬಲಿಯಾಗುತ್ತಿವುದರಿಂದ ಆತಂಕಕ್ಕೊಳಗಾಗಿರುವ ರೈತರಿಗೆ ಈಗ ನಾಯಿಗಳ ಕಾಟದಿಂದಾಗಿ ಇನ್ನಷ್ಟು ಆತಂಕಕ್ಕೊಳಗಾಗಿದ್ದಾರೆ.</p>.<p>ಹೋಬಳಿಯ ಕಣಗಾಲು ಗ್ರಾಮದಲ್ಲಿ ಮಂಗಳವಾರ ಬೀದಿನಾಯಿಗಳ ದಾಳಿಗೆ ಗ್ರಾಮದ ಕೆ.ಪಿ.ನಾಗೇಗೌಡ ಅವರಿಗೆ ಸೇರಿದ 10 ಕುರಿಗಳು ಬಲಿಯಾಗಿವೆ.</p>.<p>ನಾಗೇಗೌಡ ಅವರು ಪಕ್ಕದ ಜಮೀನಿಗೆ ಕೆಲಸಕ್ಕಾಗಿ ತೆರಳಿದ್ದ ವೇಳೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ಕೊಟ್ಟಿಗೆಗೆ ನುಗ್ಗಿ ಕುರಿಗಳನ್ನು ಕಚ್ಚಿ ಸಾಯಿಸಿವೆ. ಸುಮಾರು ₹ 1 ಲಕ್ಷ ಮೌಲ್ಯದ ಕುರಿಗಳು ಮೃತಪಟ್ಟಿವೆ ಎಂದು ಅವರು ತಿಳಿಸಿದ್ದಾರೆ.</p>.<p>ಅರಸು ಕಲ್ಲಹಳ್ಳಿ ಪಶುವೈದ್ಯ ಆಸ್ಪತ್ರೆಯ ಡಾ.ಶರತ್ಕುಮಾರ್ ಕುರಿಗಳ ಶವ ಪರೀಕ್ಷೆ ನಡೆಸಿ, ಪರಿಹಾರಕ್ಕೆ ಅರ್ಜಿ ಸಲ್ಲಿಸುವಂತೆ ಸಲಹೆ ನೀಡಿದರು.</p>.<p>ಇತ್ತೀಚಿಗೆ ಗ್ರಾಮದಲ್ಲಿ ಬೀದಿನಾಯಿ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರು ರಾತ್ರಿ ಸಮಯದಲ್ಲಿ ಓಡಾಡದ ಸ್ಥಿತಿ ನಿರ್ಮಾಣವಾಗಿದೆ. ಹಸು,ಕುರಿ ಮೇಕೆಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡುತ್ತಿದ್ದು ನಾಯಿಗಳನ್ನು ಗ್ರಾಮ ಪಂಚಾಯಿತಿಯವರು ಹಿಡಿದು ಬೇರೆಡೆಗೆ ಸಾಗಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>