ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾನಿಗಳಿಂದ ಮೈಸೂರು ಮೃಗಾಲಯಕ್ಕೆ ₹ 73.16 ಲಕ್ಷ ದೇಣಿಗೆ

Last Updated 29 ಏಪ್ರಿಲ್ 2020, 10:17 IST
ಅಕ್ಷರ ಗಾತ್ರ

ಮೈಸೂರು: ಕೊರೋನಾ ಹಿನ್ನೆಲೆಯಲ್ಲಿ ದೇಶವೇ ಲಾಕ್ ಡೌನ್ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದರ ಬಿಸಿ ಮೃಗಾಲಯಗಳಿಗೂ ತಟ್ಟಿದೆ. ಪ್ರವಾಸಿಗರ ಆಗಮನ ಶೂನ್ಯಕ್ಕೆ ಇಳಿದಿದೆ. ಪ್ರವೇಶ ಶುಲ್ಕದಿಂದ ಸಂಗ್ರಹವಾಗುತ್ತಿದ್ದ ಹಣದಿಂದ ಸಿಗುತ್ತಿದ್ದ ಆದಾಯವೂ ಇಲ್ಲದಂತಾಗಿದೆ.

ಈ ವಿಷಯ ಏಪ್ರಿಲ್ 22 ರಂದು ಮೈಸೂರಿನ ಪ್ರಾಣಿ ಸಂಗ್ರಹಾಲಯಕ್ಕೆ ಸಚಿವರು ಭೇಟಿ ಕೊಟ್ಟಾಗ ಗಮನಕ್ಕೆ ಬಂದಿತ್ತು. ತಕ್ಷಣ ₹ 1.75 ಲಕ್ಷ ಹಣವನ್ನು ವೈಯಕ್ತಿಕವಾಗಿ ನೆರವನ್ನು ನೀಡುವ ಮೂಲಕ 5 ವರ್ಷದ ಚಾಮುಂಡಿ ಎಂಬ ಹೆಣ್ಣಾನೆಯನ್ನು 1 ವರ್ಷದ ಅವಧಿಗೆ ದತ್ತುಪಡೆದರು. ಅಲ್ಲಿರುವ 16 ಹುಲಿಗಳ ಒಂದು ದಿನದ ಮಾಂಸದ ಊಟದ ಖರ್ಚಾದ ₹ 25 ಸಾವಿರ ರೂಪಾಯಿಯ ನೆರವನ್ನೂ ನೀಡಿದರು.

ಮೈಸೂರು ಮೃಗಾಲಯಕ್ಕೆ ದೇಣಿಗೆ ನೀಡುವಂತೆ ವೈಯಕ್ತಿಕವಾಗಿ ಮಾಡಿಕೊಂಡ ಮನವಿಗೆ ಉತ್ತಮ ಪ್ರತಿಕ್ರಿಯೆ ಲಭ್ಯವಾಯಿತು. ಈಗ ₹ 73.16 ಲಕ್ಷಸಂಗ್ರಹವಾಗಿದ್ದು, ಅದನ್ನು ಮೃಗಾಲಯಕ್ಕೆ ಸಚಿವರು ಹಸ್ತಾಂತರ ಮಾಡಿದರು.

ಕೊರೋನಾ ಹಿನ್ನೆಲೆಯಲ್ಲಿ ಏ. 23 ರಂದು ಅಧಿಕಾರಗಳ ಜೊತೆ ನಾನು ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿದ್ದೆ. ಆಗ ಪ್ರಾಣಿ-ಪಕ್ಷಿಗಳಿಗೆ ಆಹಾರ, ನೀರಿನ ಅವಶ್ಯಕತೆ ಹಾಗೂ ಸ್ವಚ್ಛತೆಯ ನಿರ್ವಹಣೆ ಮಾಡಲು ದಿನಕ್ಕೆ ತಗಲುವವೆಚ್ಚದ ಬಗ್ಗೆ ನನ್ನ ಗಮನಕ್ಕೆ ಬಂತು. ಇವುಗಳನಿರ್ವಹಣೆಗೆಂದೇ ಮೃಗಾಯದಲ್ಲಿ ಪಕ್ಷಿ ಪ್ರಾಣಿಗಳನ್ನುದತ್ತು ತೆಗೆದುಕೊಳ್ಳುವ ವ್ಯವಸ್ಥೆ ಇರುವ ಹಿನ್ನೆಲೆಯಲ್ಲಿ ನಿರ್ವಹಣೆಗಾಗಿ ಉದಾರವಾಗಿ ಸಹಾಯ ಮಾಡುವಂತೆನನ್ನ ಮತ ಕ್ಷೇತ್ರವಾದ ಯಶವಂತಪುರ ವಿಧಾನಸಭಾಕ್ಷೇತ್ರದ ಜನರಲ್ಲಿ ಮನವಿ ಮಾಡಿದೆ. ಇದಕ್ಕೆ ಸ್ಪಂದಿಸಿದ ಅನೇಕರು ಮೃಗಾಲಯದಲ್ಲಿನ ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆದುಕೊಳ್ಳಲು ಮುಂದೆ ಬಂದು ಉದಾರ ನೆರವನ್ನು ನೀಡಿದ್ದಾರೆ. ಪ್ರಾಣಿ ಪ್ರೀತಿಯ ಹೃದಯವಂತರಿಂದ ಒಟ್ಟಾರೆ ₹ 73.16 ಲಕ್ಷ ರೂಪಾಯಿ ಸಂಗ್ರಹವಾಗಿದ್ದು, ಮೃಗಾಲಯಕ್ಕೆ ಹಸ್ತಾಂತರಿಸಿದ್ದೇನೆ ಎಂದು ಸಚಿವಎಸ್.ಟಿ.ಸೋಮಶೇಖರ್ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT