ಉಪಚುನಾವಣೆ ಸೋಲಿಗೆ ಈ ಇಬ್ಬರು ನಾಯಕರು ಕಾರಣರಲ್ಲ. ಬದಲಿಗೆ, ಚೆಕ್ಪೋಸ್ಟ್ಗಳಲ್ಲಿ ಬಿಗಿಯಾದ ತಪಾಸಣೆ ನಡೆಯದೇ ಹೋಗಿದ್ದು, ನೀತಿಸಂಹಿತೆ ಉಲ್ಲಂಘನೆಯ ದೂರುಗಳನ್ನು ಚುನಾವಣಾ ಆಯೋಗ ಪರಿಗಣಿಸದೇ ಹೋಗಿದ್ದು, ಸಿದ್ದರಾಮಯ್ಯ ಅವರನ್ನು ಹೊರಗಿಟ್ಟು ಜೆಡಿಎಸ್ ಜತೆ ಸರ್ಕಾರ ರಚನೆ ಎಂಬ ಮಾತುಗಳು ಹಾಗೂ ಕೆಲವು ಕಾಂಗ್ರೆಸ್ ನಾಯಕರು ಸರಿಯಾಗಿ ಪ್ರಚಾರದಲ್ಲಿ ತೊಡಗಿಕೊಳ್ಳದೇ ಹೋಗಿದ್ದೇ ಕಾರಣ ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.