ಷರತ್ತು ಅನ್ವಯ: ‘ಸುದೀರ್ಘ ಅವಧಿ ದೇಶ ಲಾಕ್ಡೌನ್ ಹಿಡಿತದಲ್ಲಿತ್ತು. ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಬೇಕೆಂಬ ದೃಷ್ಟಿಯಲ್ಲಿ ಈಗ ಕೇಂದ್ರ ಸರ್ಕಾರ ಹಲವು ಷರತ್ತುಗಳೊಂದಿಗೆ ದೇವಸ್ಥಾನ, ಮಸೀದಿ, ಚರ್ಚ್, ಹೋಟೆಲ್, ರೆಸ್ಟೋರೆಂಟ್ ತೆರೆಯಲು ಅನುಮತಿ ಕೊಟ್ಟಿದೆ. ಸಾರ್ವಜನಿಕರು ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದರ ಜೊತೆಗೆ ಕೊರೊನಾ ವೈರಸ್ ಜೊತೆಗೆ ಬದುಕುವುದನ್ನು ಕಲಿಯಬೇಕು’ ಎಂದು ಸೋಮಶೇಖರ್ ಸಲಹೆ ನೀಡಿದರು.