<p><strong>ಮೈಸೂರು</strong>: ‘ಮಕ್ಕಳ ಪ್ರತಿಭೆಯನ್ನು ಅಂಕ ಗಳಿಂದ ಅಳೆಯಬಾರದು. ಅವರಲ್ಲಿರುವ ವಿಶಿಷ್ಟ ಪ್ರತಿಭೆಯನ್ನು ಗುರುತಿಸುವ ಪರೀಕ್ಷಾ ವ್ಯವಸ್ಥೆ ಅಳವಡಿಸಬೇಕು’ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಹೇಳಿದರು.</p>.<p>ಜಿಲ್ಲಾ ಪತ್ರಕರ್ತರ ಸಂಘದ ವತಿ ಯಿಂದ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮಮದಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು.</p>.<p>ಪರೀಕ್ಷೆಯಲ್ಲಿ ದೊರೆಯುವ ಅಂಕಗಳು ಪ್ರತಿಭೆಯ ಮಾನದಂಡವೇ ಎಂಬ ಪ್ರಶ್ನೆಯನ್ನು ಶಿಕ್ಷಕರು, ಪೋಷ ಕರು ಹಾಕಿಕೊಳ್ಳಬೇಕು. ಈಗ ನೂರಕ್ಕೆ ನೂರು ಅಂಕ ಗಳಿಸುವುದು ಸಾಮಾನ್ಯ ಎಂಬಂತಾಗಿದೆ. ಅಂಕಗಳನ್ನು<br />ನಿರ್ಧರಿ ಸುವ ವ್ಯವಸ್ಥೆಯಲ್ಲಿ ಏನೋ ದೋಷವಿದೆ ಎಂಬ ಅನುಮಾನ ಮೂಡುತ್ತದೆ. ಇದ ರಲ್ಲಿ ವಿದ್ಯಾರ್ಥಿಗಳ ತಪ್ಪಿಲ್ಲ ಎಂದರು.</p>.<p>ಪ್ರತಿಭೆ ಅನಾವರಣಗೊಳಿಸಲು ಸೂಕ್ತ ವ್ಯವಸ್ಥೆ ರೂಪಿಸಬೇಕು. ಮಕ್ಕಳು ಎಲ್ಲ ವಿಷಯಗಳಲ್ಲೂ ಪರಿಣತಿ ಹೊಂದಿರುವುದಿಲ್ಲ. ಆದರೆ, ಪ್ರತಿಯೊಬ್ಬರಲ್ಲೂ ಅವರದ್ದೇ ಆದ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಪರಿಚಯಿಸುವ ಕೆಲಸ ಆಗಬೇಕು ಎಂದು ಸಲಹೆ ನೀಡಿದರು.</p>.<p class="Subhead">ಪುರಸ್ಕಾರ: ಪಿಯುಸಿ ವಿಭಾಗದಲ್ಲಿ ಡಿ.ಎನ್.ಪೂಜಾ, ಎಸ್ಸೆಸ್ಸೆಲ್ಸಿ ವಿಭಾಗದಲ್ಲಿ ರಿಷಿತಾ ನಾಗೇಂದ್ರಕುಮಾರ್, ಎಂ.ಆರ್.ಚಂದನ್ಗೌಡ, ಎಲ್.ಗಗನ್, ಎಸ್.ಕೀರ್ತನಾ, ಎಸ್.ಪಿ.ಸಮೃದ್ಧ, ನೇಸರ ಅಮಿನಗಡ, ಆರ್.ಹರ್ಷಿತಾ, ಬಿ.ಎಂ.ವಿಶ್ವಾಸ್ ಗೌಡ, ಅಮೃತ ಡಿ.ಆರಾಧ್ಯ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಸಂಘದಿಂದ ದಿ.ರಾಜಶೇಖರ್ ಕೋಟಿ ಹೆಸರಿನಲ್ಲಿ ದತ್ತಿ ಪ್ರಶಸ್ತಿ ಸ್ಥಾಪಿಸಿದ್ದು, ಪ್ರತಿ ವರ್ಷ ಇದನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.</p>.<p>ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಹರೀಶ್ಗೌಡ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಕಾರ್ಯದರ್ಶಿ ಕೆ.ಜೆ.ಲೋಕೇಶ್ಬಾಬು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮಕ್ಕಳ ಪ್ರತಿಭೆಯನ್ನು ಅಂಕ ಗಳಿಂದ ಅಳೆಯಬಾರದು. ಅವರಲ್ಲಿರುವ ವಿಶಿಷ್ಟ ಪ್ರತಿಭೆಯನ್ನು ಗುರುತಿಸುವ ಪರೀಕ್ಷಾ ವ್ಯವಸ್ಥೆ ಅಳವಡಿಸಬೇಕು’ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಹೇಳಿದರು.</p>.<p>ಜಿಲ್ಲಾ ಪತ್ರಕರ್ತರ ಸಂಘದ ವತಿ ಯಿಂದ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮಮದಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು.</p>.<p>ಪರೀಕ್ಷೆಯಲ್ಲಿ ದೊರೆಯುವ ಅಂಕಗಳು ಪ್ರತಿಭೆಯ ಮಾನದಂಡವೇ ಎಂಬ ಪ್ರಶ್ನೆಯನ್ನು ಶಿಕ್ಷಕರು, ಪೋಷ ಕರು ಹಾಕಿಕೊಳ್ಳಬೇಕು. ಈಗ ನೂರಕ್ಕೆ ನೂರು ಅಂಕ ಗಳಿಸುವುದು ಸಾಮಾನ್ಯ ಎಂಬಂತಾಗಿದೆ. ಅಂಕಗಳನ್ನು<br />ನಿರ್ಧರಿ ಸುವ ವ್ಯವಸ್ಥೆಯಲ್ಲಿ ಏನೋ ದೋಷವಿದೆ ಎಂಬ ಅನುಮಾನ ಮೂಡುತ್ತದೆ. ಇದ ರಲ್ಲಿ ವಿದ್ಯಾರ್ಥಿಗಳ ತಪ್ಪಿಲ್ಲ ಎಂದರು.</p>.<p>ಪ್ರತಿಭೆ ಅನಾವರಣಗೊಳಿಸಲು ಸೂಕ್ತ ವ್ಯವಸ್ಥೆ ರೂಪಿಸಬೇಕು. ಮಕ್ಕಳು ಎಲ್ಲ ವಿಷಯಗಳಲ್ಲೂ ಪರಿಣತಿ ಹೊಂದಿರುವುದಿಲ್ಲ. ಆದರೆ, ಪ್ರತಿಯೊಬ್ಬರಲ್ಲೂ ಅವರದ್ದೇ ಆದ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಪರಿಚಯಿಸುವ ಕೆಲಸ ಆಗಬೇಕು ಎಂದು ಸಲಹೆ ನೀಡಿದರು.</p>.<p class="Subhead">ಪುರಸ್ಕಾರ: ಪಿಯುಸಿ ವಿಭಾಗದಲ್ಲಿ ಡಿ.ಎನ್.ಪೂಜಾ, ಎಸ್ಸೆಸ್ಸೆಲ್ಸಿ ವಿಭಾಗದಲ್ಲಿ ರಿಷಿತಾ ನಾಗೇಂದ್ರಕುಮಾರ್, ಎಂ.ಆರ್.ಚಂದನ್ಗೌಡ, ಎಲ್.ಗಗನ್, ಎಸ್.ಕೀರ್ತನಾ, ಎಸ್.ಪಿ.ಸಮೃದ್ಧ, ನೇಸರ ಅಮಿನಗಡ, ಆರ್.ಹರ್ಷಿತಾ, ಬಿ.ಎಂ.ವಿಶ್ವಾಸ್ ಗೌಡ, ಅಮೃತ ಡಿ.ಆರಾಧ್ಯ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಸಂಘದಿಂದ ದಿ.ರಾಜಶೇಖರ್ ಕೋಟಿ ಹೆಸರಿನಲ್ಲಿ ದತ್ತಿ ಪ್ರಶಸ್ತಿ ಸ್ಥಾಪಿಸಿದ್ದು, ಪ್ರತಿ ವರ್ಷ ಇದನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.</p>.<p>ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಹರೀಶ್ಗೌಡ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಕಾರ್ಯದರ್ಶಿ ಕೆ.ಜೆ.ಲೋಕೇಶ್ಬಾಬು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>