ಮೈಸೂರಿನ ಪೌರಕಾರ್ಮಿಕರಾದ ಮರಗಮ್ಮ, ವೈದ್ಯಕೀಯ ಅಧಿಕಾರಿ ಡಾ. ನವೀನ್ ಕುಮಾರ್, ನರ್ಸ್ ರುಕ್ಮಿಣಿ, ಆಶಾ ಕಾರ್ಯಕರ್ತೆ ನೂರ್ ಜಾನ್, ಪೊಲೀಸ್ ಕಾನ್ಸ್ ಟೆಬಲ್ ಪಿ.ಕುಮಾರ್, ಸಾಮಾಜಿಕ ಕಾರ್ಯಕರ್ತ ಆಯೂಬ್ ಅಹಮದ್ ಅವರನ್ನು ದಸರಾ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದರು.
ತಜ್ಞರ ತಂಡ ನೀಡಿದ ವರದಿ ಪ್ರಕಾರವಾಗಿಯೇ ದಸರಾ ಆಚರಣೆ ಮಾಡಲಾಗುವುದು. ಇದರಲ್ಲಿ ಯಾವುದೇ ವ್ಯತ್ಯಾಸ ಇರದು. ತಂಡದ ಶಿಫಾರಸಿನ ಅನ್ವಯ ಎಲ್ಲ ಕಾರ್ಯಕ್ರಮಗಳನ್ನು ನಿಗದಿಪಡಿಸುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಗೂ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.