ಈ ಕುರಿತು ಪ್ರತಿಕ್ರಿಯಿಸಿದ ಮೈಸೂರು ಮಹಾನಗರ ಪಾಲಿಕೆ ಒಳಚರಂಡಿ ಸಹಾಯಕರು ಹಾಗೂ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಪಳನಿ, ‘ನಮ್ಮಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು ನಾವು ಭಾನುವಾರದವರೆಗೆ ಎಲ್ಲ ದೂರುಗಳನ್ನು ವಿಲೇವಾರಿ ಮಾಡಿ ಪ್ರತಿಭಟನೆಗೆ ಕುಳಿತಿದ್ದೇವೆ. ಇನ್ನಾದರೂ ನಮ್ಮನ್ನು ಕಾಯಂಗೊಳಿಸಬೇಕು’ ಎಂದು ಮನವಿ ಮಾಡಿದರು.