ಸಂಸ್ಕೃತ ಭಾಷೆಯಲ್ಲಿ 50 ವರ್ಷಗಳಿಂದ ಮೈಸೂರಿನಿಂದ ಪ್ರಕಟವಾಗುತ್ತಿರುವ ‘ಸುಧರ್ಮ’ ದಿನಪತ್ರಿಕೆಯನ್ನು ಪರಿಗಣಿಸಿ 2 ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಕೆ.ವಿ.ಸಂಪತ್ ಕುಮಾರ್- ಕೆ.ಎಸ್.ಜಯಲಕ್ಷ್ಮೀ ದಂಪತಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಿತ್ತು. ಇದರ ಜತೆಗೆ, ಸಿದ್ಧಾರೂಢ ಪ್ರಶಸ್ತಿ, ಶಿವರಾತ್ರಿ ದೇಶಿಕೇಂದ್ರ ಮಾಧ್ಯಮ ಪ್ರಶಸ್ತಿ, ಅಬ್ದುಲ್ ಕಲಾಂ ಪ್ರಶಸ್ತಿಗಳೂ ಇವರಿಗೆ ಲಭಿಸಿವೆ.