ನಗರದ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಟರಾಜ ಪ್ರತಿಷ್ಠಾನ ಶನಿವಾರ ಆಯೋಜಿಸಿದ್ದ ‘ಸಾಂಸ್ಕೃತಿಕ, ಕಲಾ, ವಾಣಿಜ್ಯ, ವಿಜ್ಞಾನ ಮತ್ತು ಕ್ರೀಡಾ ವೇದಿಕೆ' ಉದ್ಘಾಟಿಸಿದ ಅವರು ಮಾತನಾಡಿ, ‘ಚಿದಾನಂದ ಸ್ವಾಮೀಜಿ ನೇರ ನಡೆ, ನುಡಿ ಹಾಗೂ ದೂರದೃಷ್ಟಿಯುಳ್ಳ ನಿಷ್ಠುರವಾದಿ. ಯುವ ಜನಾಂಗ ಹೇಗೆ ಮುಖ್ಯವಾಹಿನಿಗೆ ಬರಬೇಕು ಎಂಬುದನ್ನು ಅರಿತವರಾಗಿದ್ದು, ಬಸವಣ್ಣನವರ ಮಾರ್ಗದಲ್ಲಿ ಸಮಾಜ ಕಟ್ಟಲು ಶ್ರಮಿಸುತ್ತಿದ್ದಾರೆ’ ಎಂದರು.