12 ನಗರ ಸಶಸ್ತ್ರ ತುಕಡಿ, 4 ಕರ್ನಾಟಕ ರಾಜ್ಯ ಮೀಸಲು ಪಡೆ, 30 ಅಶ್ವಾರೋಹಿ ದಳ, 2 ಕಮಾಂಡೊ ಪಡೆಗಳನ್ನು ನಿಯೋಜಿಸಲಾಗಿದೆ. 27 ಇನ್ಸ್ಪೆಕ್ಟರ್, 39 ಸಬ್ಇನ್ಸ್ಪೆಕ್ಟರ್, 108 ಸಹಾಯಕ ಸಬ್ಇನ್ಸ್ಪೆಕ್ಟರ್, 774 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 10 ಕಡೆ ಚೆಕ್ಪೋಸ್ಟ್ಗಳನ್ನು ರಚಿಸಲಾಗಿದೆ. ಮಂಗಳವಾರ ರಾತ್ರಿಯಿಂದಲೇ ಪ್ರಾರ್ಥನಾ ಮಂದಿರಗಳ ಮೇಲೆ ಕಣ್ಗಾವಲು ಇರಿಸಲಾಗಿದೆ ಎಂದು ಡಿಸಿಪಿ ಮುತ್ತುರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.