ಪತ್ರಕರ್ತರು, ಕೇಂದ್ರ ಸಚಿವರು, ಸಿಬಿಐ, ನ್ಯಾಯಾಂಗ, ಚುನಾವಣಾ ಆಯೋಗ ಸೇರಿದಂತೆ ಬಹುತೇಕರ ಮೇಲೆ ಸರ್ಕಾರ ಗೂಢಾಚಾರಿಕೆ ನಡೆಸಿದೆ. ಪತ್ರಕರ್ತರ ಪತ್ನಿಯರು, ಸಿಬಿಐ ಮುಖ್ಯಸ್ಥರ ಸೊಸೆ, ಪುತ್ರರ ಮೇಲೂ ಕಣ್ಣಿಡಲಾಗಿದೆ. ಸ್ನಾನದ ಮನೆ, ಮಲಗುವ ಕೋಣೆಯಲ್ಲಿ ಏನು ನಡೆಯುತ್ತಿದೆ ಎಂಬುದನ್ನು ತಿಳಿದುಕೊಳ್ಳುವ ಕೆಲಸದಲ್ಲಿ ಸರ್ಕಾರ ನಿರತವಾಗಿದೆ. ಖಾಸಗಿತನದ ಹಕ್ಕನ್ನು ಸರ್ಕಾರ ಉಲ್ಲಂಘಿಸಿ, ಪ್ರಜಾಪ್ರಭುತ್ವದ ಮೇಲೆಯೇ ದಾಳಿ ನಡೆಸುತ್ತಿದೆ ಎಂದು ಹರಿಹಾಯ್ದರು.