ಇವರು ಕೆ.ಆರ್.ಪೇಟೆಯ ಎಸ್ಡಿಪಿಒ ಕಚೇರಿಯಲ್ಲಿ ಪ್ರಥಮದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಚುನಾವಣಾ ತರಬೇತಿಗೆಂದು ಮಳವಳ್ಳಿಗೆ ತೆರಳಿ ವಾಪಸ್ ತಮ್ಮ ಸ್ವಗ್ರಾಮ ಎಚ್.ಡಿ.ಕೋಟೆ ತಾಲ್ಲೂಕಿನ ಜಿನ್ನಹಳ್ಳಿಗೆ ತೆರಳುತ್ತಿದ್ದರು. ಈ ವೇಳೆ ಗ್ರಾಮಾಂತರ ಬಸ್ನಿಲ್ದಾಣದಲ್ಲಿ ಬಸ್ ಇಳಿಯುತ್ತಿದ್ದಂತೆ ಕುಸಿದು ಬಿದ್ದ ಇವರು ಸ್ಥಳದಲ್ಲೇ ಸಾವನ್ನಪ್ಪಿದರು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ಅಂಶ ಮರಣೋತ್ತರ ಪರೀಕ್ಷೆಯಲ್ಲಿ ಗೊತ್ತಾಗಿದೆ.