<p><strong>ಮೈಸೂರು: </strong>ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್ಪಿ)ವು ಸ್ಪರ್ಧಿಸಲಿದೆ ಎಂದು ಶಾಸಕ ಮಹೇಶ್ ತಿಳಿಸಿದರು.</p>.<p>ನಗರದ ರೋಟರಿ ಸಭಾಂಗಣದಲ್ಲಿ ಬಿಎಸ್ಪಿ ವತಿಯಿಂದ ಶುಕ್ರವಾರ ನಡೆದ ಕೃತಜ್ಞತಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಚುನಾವಣೆ ಎಂದರೆ ಭಯವಾಗುವಂತಹ ಸ್ಥಿತಿ ನಿರ್ಮಾಣವಾಗಿದೆ. ಈಗಷ್ಟೇ ಲೋಕಸಭಾ ಚುನಾವಣೆ ಎದುರಿಸಿದ್ದೇವೆ. ಇದರ ಬೆನ್ನಲ್ಲೆ ಸ್ಥಳೀಯ ಸಂಸ್ಥೆಗಳ ಚುನಾವಣೆಯೂ ಬಂದಿದೆ. ಇದರಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವ ಇರಾದೆ ಇದೆ ಎಂದರು.</p>.<p>ಈಗಾಗಲೇ ಚಾಮರಾಜನಗರ, ಮೈಸೂರು ಭಾಗಗಳಲ್ಲಿ ಬಿಎಸ್ಪಿ ಸಾಕಷ್ಟು ಪ್ರಭಾವಶಾಲಿಯಾಗಿದೆ. ಕೇವಲ ಇಲ್ಲಿ ಮಾತ್ರವಲ್ಲ ಎಲ್ಲ 165 ನಗರ, ಪುರಸಭೆ, ಪಟ್ಟಣ ಪಂಚಾಯಿತಿಗಳ ಚುನಾವಣೆಗಳಲ್ಲೂ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಈ ಬಾರಿ ಹೆಚ್ಚಿನ ಪ್ರಾಬಲ್ಯ ಗಳಿಸುವ ವಿಶ್ವಾಸ ಇದೆ ಎಂದು ತಿಳಿಸಿದರು.</p>.<p>ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಮೋಹನ್ ಮೌರ್ಯ ಮಾತನಾಡಿ, ‘ಕೊಡಗಿನಲ್ಲಿ ಪಕ್ಷ ಕಟ್ಟಲು ಒಳ್ಳೆಯ ಅವಕಾಶಗಳಿವೆ. ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸೂಕ್ತ ಯೋಜನೆ ರೂಪಿಸಿಕೊಂಡರೆ ಪಕ್ಷ ಬಲವಾಗಿ ಬೇರೂರಲಿದೆ’ ಎಂದರು.</p>.<p>ಕೆ.ಆರ್.ಕ್ಷೇತ್ರದ ಅಧ್ಯಕ್ಷ ಶ್ರೀನಿವಾಸಪ್ರಸಾದ್ ಮಾತನಾಡಿ, ‘ಕಾರ್ಯಕರ್ತರ ಕೊರತೆಯ ನಡುವೆಯೂ ಕೆ.ಆರ್.ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾಕಷ್ಟು ಮತಗಳು ಪಕ್ಷದ ಅಭ್ಯರ್ಥಿಗೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷ ಕುಮಾರ್ ಮಾತನಾಡಿ, ‘ಕನಿಷ್ಠ ಎಂದರೂ ಕ್ಷೇತ್ರದಲ್ಲಿ 10ರಿಂದ 15 ಸಾವಿರ ಮತಗಳು ಪಕ್ಷಕ್ಕೆ ಬರಲಿವೆ. ಮುಂಬರುವ ದಿನಗಳಲ್ಲಿ ಇದರ ಪ್ರಮಾಣದಲ್ಲಿ ಏರಿಕೆಯಾಗಲಿದೆ’ ಎಂದು ತಿಳಿಸಿದರು.</p>.<p>ಮೈಸೂರು-ಕೊಡುಗು ಲೋಕಸಭೆ ಕ್ಷೆತ್ರದ ಬಿಎಸ್ಪಿ ಅಭ್ಯರ್ಥಿ ಡಾ.ಬಿ.ಚಂದ್ರೇಗೌಡ, ನಗರ ಘಟಕ ಅಧ್ಯಕ್ಷ ಬಸವರಾಜು, ಪಾಲಿಕೆ ಸದಸ್ಯರಾದ ಬೇಗಂ ಪಲ್ಲವಿ, ಮುಖಂಡರಾದ ಅರಕಲವಾಡಿ ನಾಗೇಂದ್ರ, ಸಿದ್ಧರಾಜು, ರಾಹುಲ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್ಪಿ)ವು ಸ್ಪರ್ಧಿಸಲಿದೆ ಎಂದು ಶಾಸಕ ಮಹೇಶ್ ತಿಳಿಸಿದರು.</p>.<p>ನಗರದ ರೋಟರಿ ಸಭಾಂಗಣದಲ್ಲಿ ಬಿಎಸ್ಪಿ ವತಿಯಿಂದ ಶುಕ್ರವಾರ ನಡೆದ ಕೃತಜ್ಞತಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಚುನಾವಣೆ ಎಂದರೆ ಭಯವಾಗುವಂತಹ ಸ್ಥಿತಿ ನಿರ್ಮಾಣವಾಗಿದೆ. ಈಗಷ್ಟೇ ಲೋಕಸಭಾ ಚುನಾವಣೆ ಎದುರಿಸಿದ್ದೇವೆ. ಇದರ ಬೆನ್ನಲ್ಲೆ ಸ್ಥಳೀಯ ಸಂಸ್ಥೆಗಳ ಚುನಾವಣೆಯೂ ಬಂದಿದೆ. ಇದರಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವ ಇರಾದೆ ಇದೆ ಎಂದರು.</p>.<p>ಈಗಾಗಲೇ ಚಾಮರಾಜನಗರ, ಮೈಸೂರು ಭಾಗಗಳಲ್ಲಿ ಬಿಎಸ್ಪಿ ಸಾಕಷ್ಟು ಪ್ರಭಾವಶಾಲಿಯಾಗಿದೆ. ಕೇವಲ ಇಲ್ಲಿ ಮಾತ್ರವಲ್ಲ ಎಲ್ಲ 165 ನಗರ, ಪುರಸಭೆ, ಪಟ್ಟಣ ಪಂಚಾಯಿತಿಗಳ ಚುನಾವಣೆಗಳಲ್ಲೂ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಈ ಬಾರಿ ಹೆಚ್ಚಿನ ಪ್ರಾಬಲ್ಯ ಗಳಿಸುವ ವಿಶ್ವಾಸ ಇದೆ ಎಂದು ತಿಳಿಸಿದರು.</p>.<p>ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಮೋಹನ್ ಮೌರ್ಯ ಮಾತನಾಡಿ, ‘ಕೊಡಗಿನಲ್ಲಿ ಪಕ್ಷ ಕಟ್ಟಲು ಒಳ್ಳೆಯ ಅವಕಾಶಗಳಿವೆ. ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸೂಕ್ತ ಯೋಜನೆ ರೂಪಿಸಿಕೊಂಡರೆ ಪಕ್ಷ ಬಲವಾಗಿ ಬೇರೂರಲಿದೆ’ ಎಂದರು.</p>.<p>ಕೆ.ಆರ್.ಕ್ಷೇತ್ರದ ಅಧ್ಯಕ್ಷ ಶ್ರೀನಿವಾಸಪ್ರಸಾದ್ ಮಾತನಾಡಿ, ‘ಕಾರ್ಯಕರ್ತರ ಕೊರತೆಯ ನಡುವೆಯೂ ಕೆ.ಆರ್.ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾಕಷ್ಟು ಮತಗಳು ಪಕ್ಷದ ಅಭ್ಯರ್ಥಿಗೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷ ಕುಮಾರ್ ಮಾತನಾಡಿ, ‘ಕನಿಷ್ಠ ಎಂದರೂ ಕ್ಷೇತ್ರದಲ್ಲಿ 10ರಿಂದ 15 ಸಾವಿರ ಮತಗಳು ಪಕ್ಷಕ್ಕೆ ಬರಲಿವೆ. ಮುಂಬರುವ ದಿನಗಳಲ್ಲಿ ಇದರ ಪ್ರಮಾಣದಲ್ಲಿ ಏರಿಕೆಯಾಗಲಿದೆ’ ಎಂದು ತಿಳಿಸಿದರು.</p>.<p>ಮೈಸೂರು-ಕೊಡುಗು ಲೋಕಸಭೆ ಕ್ಷೆತ್ರದ ಬಿಎಸ್ಪಿ ಅಭ್ಯರ್ಥಿ ಡಾ.ಬಿ.ಚಂದ್ರೇಗೌಡ, ನಗರ ಘಟಕ ಅಧ್ಯಕ್ಷ ಬಸವರಾಜು, ಪಾಲಿಕೆ ಸದಸ್ಯರಾದ ಬೇಗಂ ಪಲ್ಲವಿ, ಮುಖಂಡರಾದ ಅರಕಲವಾಡಿ ನಾಗೇಂದ್ರ, ಸಿದ್ಧರಾಜು, ರಾಹುಲ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>