ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್‌ 2ಕ್ಕೆ ಕಾಂಗ್ರೆಸ್ ಆತ್ಮಾವಲೋಕನ ಸಭೆ

Last Updated 30 ಮೇ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪ್ರದೇಶ ಕಾಂಗ್ರೆಸ್‌ ಸಮಿತಿಯ (ಕೆಪಿಸಿಸಿ) ಪದಾಧಿಕಾರಿಗಳು, ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ವಿವಿಧ ವಿಭಾಗಗಳ ರಾಜ್ಯ ಘಟಕಗಳ ಅಧ್ಯಕ್ಷರ ಸಭೆ ನಗರದ ಸರ್ದಾರ್ ಪಟೇಲ್ ಭವನದಲ್ಲಿ ಜೂನ್‌ 2ರಂದು ನಡೆಯಲಿದೆ.

ವಿಧಾನಸಭೆ ಚುನಾವಣೆಯ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್‌ ಪದಾಧಿಕಾರಿಗಳ ಸಭೆ ನಡೆಯಲಿದೆ. ಚುನಾವಣೆಯಲ್ಲಿ ಪಕ್ಷದ ಸಾಧನೆಯ ಕುರಿತು ಸಭೆಯಲ್ಲಿ ಆತ್ಮಾವಲೋಕನ ನಡೆಯಲಿದೆ.

ಅಭ್ಯರ್ಥಿಗಳ ಸೋಲಿಗೆ ಕಾರಣ, ಟಿಕೆಟ್‌ ಹಂಚಿಕೆಯಲ್ಲಿನ ಗೊಂದಲ, ನಾಯಕರ ವರ್ತನೆ ಮತ್ತಿತರ ವಿಷಯಗಳ ಕುರಿತು ಕಾವೇರಿದ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT