ಎಚ್.ಡಿ.ಕೋಟೆ: ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ, ನುಗು ವನ್ಯಜೀವಿ ವಲಯದಲ್ಲಿನ ನುಗು ಜಲಾಶಯದ ಹಿನ್ನೀರಿನ ಬಳಿ ಹೆಣ್ಣಾನೆಯೊಂದು (35) ಅನುಮಾನಾಸ್ಪದವಾಗಿ ಮೃತಪಟ್ಟಿದೆ.
ಮುತ್ತಿಗೆಹುಂಡಿ ಸಮೀಪದ ನುಗು ಹಿನ್ನೀರಿನಲ್ಲಿ ಆನೆ ಮೃತಪಟ್ಟಿರುವುದು ಪತ್ತೆಯಾಗಿದ್ದು, ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಸೋಮವಾರ ಆನೆಯ ಮರಣೋತ್ತರ ಪರೀಕ್ಷೆ ನಡೆಯಲಿದೆ. ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿಯಲಿದೆ. ಮೇಲ್ನೋಟಕ್ಕೆ ಆನೆಯ ಹೊಟ್ಟೆ ಊದಿಕೊಂಡಿದ್ದು, ಕಾಯಿಲೆಯಿಂದ ಮೃತಪಟ್ಟಿರಬಹುದು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.