ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಎಂ.ಕುಲಕರ್ಣಿ ಮಾತನಾಡಿ, ಹಲವು ಕಾರಣಗಳಿಂದ ಆನೆಗಳ ಸಾವಿನ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಬಹಳಷ್ಟು ಬಾರಿ ಆನೆ– ಮಾನವ ಸಂಘರ್ಷದಿಂದಾಗಿ ಇವು ಪ್ರಾಣ ಕಳೆದುಕೊಳ್ಳುತ್ತಿವೆ. ಹೀಗಾಗಿ, ಆನೆಗಳ ರಕ್ಷಣೆಗಾಗಿ ಈ ದಿನವನ್ನು ಆನೆಗಳ ದಿನ ಎಂದು ಪರಿಗಣಿಸಲಾಗಿದೆ ಎಂದು ಮಾಹಿತಿ ನೀಡಿದರು.