ಜಯಮಾರ್ತಾಂಡ ದ್ವಾರದ ಮೂಲಕ ಅರಮನೆ ಆವರಣದೊಳಗೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಆನೆಗಳು ಪ್ರವೇಶಿಸಲಿವೆ. ಶುಕ್ರವಾರ ಮಧ್ಯಾಹ್ನ 12.18ರಿಂದ 12.40ರೊಳಗೆ ಸಲ್ಲುವ ಧನುರ್ ಲಗ್ನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರುಐದು ಆನೆಗಳಿಗೆ ಪುಷ್ಪಾರ್ಚನೆ ಮಾಡಿ ಸಾಂಪ್ರದಾಯಿಕವಾಗಿ ಸ್ವಾಗತ ಕೋರಲಿದ್ದಾರೆ. ಅದಕ್ಕಾಗಿ ದ್ವಾರದ ಬಳಿ ಅಲಂಕಾರ ಮಾಡಲಾಗಿದ್ದು, ಹೂವಿನಿಂದ ಮೂರು ಆನೆಗಳ ಪ್ರತಿಕೃತಿ ರಚಿಸಲಾಗಿದೆ.