ಶನಿವಾರ ಬೆಳಿಗ್ಗೆ ಬೆಟ್ಟದಬೀಡು ಗ್ರಾಮದಲ್ಲಿ ಆನೆ ಕಾಣಿಸಿಕೊಂಡಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಸಂಜೆ 5 ಗಂಟೆ ವರಗೆ ಸ್ಥಳದಲ್ಲೇ ಬೀಡು ಬಿಟ್ಟಿದ್ದರು. ನಂತರ ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಆರಂಭಿಸಿದ್ದು, ಆನೆ ಬೆಟ್ಟದಬೀಡು ಗ್ರಾಮದಿಂದ ಮೈಸೂರು ತಾಲ್ಲೂಕಿನ ಕಲ್ಲಹಳ್ಳಿ ಕೆರೆಯತ್ತ ತಲುಪಿದೆ. ಇನ್ನೂ ಆನೆ ಕಾಡಿಗಟ್ಟುವ ಕಾರ್ಯಾಚರಣೆ ಮುಂದುವರಿದಿದೆ ಎಂದು ಸಾಮಾಜಿಕ ವಲಯ ಅರಣ್ಯಾಧಿಕಾರಿ ಮಧು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.