<p><strong>ಹುಣಸೂರು (ಮೈಸೂರು):</strong> ‘ನಿಗಮ–ಮಂಡಳಿ ಅಧ್ಯಕ್ಷರು ಇದೀಗ ಅಧಿಕಾರ ಅನುಭವಿಸುತ್ತಿರುವುದು ಯಾರಿಂದ ಎಂಬುದನ್ನು ಅರ್ಥ ಮಾಡಿಕೊಂಡು ಮಾತನಾಡಬೇಕು’ ಎಂದು ವಿಧಾನ ಪರಿಷತ್ ಸದಸ್ಯ<br />ಎಚ್.ವಿಶ್ವನಾಥ್, ತಮ್ಮ ವಿರುದ್ಧ ಟೀಕಾ ಪ್ರಹಾರ ನಡೆಸಿದ ನಿಗಮ–ಮಂಡಳಿ ಅಧ್ಯಕ್ಷರಿಗೆ ಶನಿವಾರ ಇಲ್ಲಿ ತಿರುಗೇಟು ನೀಡಿದರು.</p>.<p>‘ನಮ್ಮ ತ್ಯಾಗದಿಂದಲೇ ಇವರಿಗೆ ಅಧಿಕಾರ ಸಿಕ್ಕಿರುವುದು; ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಚನೆಯಾಗಿರುವುದು. ಬಾಯಿಗೆ ಬಂದಂತೆ ಮಾತನಾಡಬಾರದು. ರಾಜ್ಯ ಉಸ್ತುವಾರಿ ಜೊತೆ ಮಾತನಾಡಿದ್ದನ್ನೇ ನಾನು ಮಾಧ್ಯಮದವರ ಬಳಿ ಹೇಳಿದ್ದೇನಷ್ಟೆ’ ಎಂದು ತಮ್ಮನ್ನು ಭೇಟಿಯಾದಮಾಧ್ಯಮದವರಿಗೆಪ್ರತಿಕ್ರಿಯಿಸಿದರು.</p>.<p>‘ಅಳಿಯನ ವಿಷಯದಲ್ಲಿ ಯಾವುದೇ ಲಾಬಿ ಮಾಡಿಲ್ಲ. ಚೀಫ್ ಎಂಜಿನಿಯರ್ ಆಗಿದ್ದ ಅಳಿಯನನ್ನು ವರ್ಗಾವಣೆ ಮಾಡಿದ ಸರ್ಕಾರ, 10 ತಿಂಗಳಿಂದ ಪರ್ಯಾಯ ಸ್ಥಳ ತೋರಿಸದೆ ಮನೆಯಲ್ಲೇ ಉಳಿಯುವಂತೆ ಮಾಡಿದೆ. ಈ ಬಗ್ಗೆ ಪ್ರಶ್ನಿಸುವುದರಲ್ಲಿ ತಪ್ಪೇನು? ಸರ್ಕಾರಿ ಅಧಿಕಾರಿಯನ್ನು ವರ್ಗ ಮಾಡುವ ಅಧಿಕಾರ ಸರ್ಕಾರಕ್ಕೆ ಇದ್ದ ಮೇಲೆ, ಪರ್ಯಾಯ ಸ್ಥಳ ನೀಡಬೇಕಾದ ಜವಾಬ್ದಾರಿಯೂ ಇದೆಯಲ್ಲವೇ? ಸರ್ಕಾರ ಈ ವಿಷಯದಲ್ಲಿ<br />ಎಡವಿದೆ’ ಎಂದು ವಿಶ್ವನಾಥ್ ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು (ಮೈಸೂರು):</strong> ‘ನಿಗಮ–ಮಂಡಳಿ ಅಧ್ಯಕ್ಷರು ಇದೀಗ ಅಧಿಕಾರ ಅನುಭವಿಸುತ್ತಿರುವುದು ಯಾರಿಂದ ಎಂಬುದನ್ನು ಅರ್ಥ ಮಾಡಿಕೊಂಡು ಮಾತನಾಡಬೇಕು’ ಎಂದು ವಿಧಾನ ಪರಿಷತ್ ಸದಸ್ಯ<br />ಎಚ್.ವಿಶ್ವನಾಥ್, ತಮ್ಮ ವಿರುದ್ಧ ಟೀಕಾ ಪ್ರಹಾರ ನಡೆಸಿದ ನಿಗಮ–ಮಂಡಳಿ ಅಧ್ಯಕ್ಷರಿಗೆ ಶನಿವಾರ ಇಲ್ಲಿ ತಿರುಗೇಟು ನೀಡಿದರು.</p>.<p>‘ನಮ್ಮ ತ್ಯಾಗದಿಂದಲೇ ಇವರಿಗೆ ಅಧಿಕಾರ ಸಿಕ್ಕಿರುವುದು; ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಚನೆಯಾಗಿರುವುದು. ಬಾಯಿಗೆ ಬಂದಂತೆ ಮಾತನಾಡಬಾರದು. ರಾಜ್ಯ ಉಸ್ತುವಾರಿ ಜೊತೆ ಮಾತನಾಡಿದ್ದನ್ನೇ ನಾನು ಮಾಧ್ಯಮದವರ ಬಳಿ ಹೇಳಿದ್ದೇನಷ್ಟೆ’ ಎಂದು ತಮ್ಮನ್ನು ಭೇಟಿಯಾದಮಾಧ್ಯಮದವರಿಗೆಪ್ರತಿಕ್ರಿಯಿಸಿದರು.</p>.<p>‘ಅಳಿಯನ ವಿಷಯದಲ್ಲಿ ಯಾವುದೇ ಲಾಬಿ ಮಾಡಿಲ್ಲ. ಚೀಫ್ ಎಂಜಿನಿಯರ್ ಆಗಿದ್ದ ಅಳಿಯನನ್ನು ವರ್ಗಾವಣೆ ಮಾಡಿದ ಸರ್ಕಾರ, 10 ತಿಂಗಳಿಂದ ಪರ್ಯಾಯ ಸ್ಥಳ ತೋರಿಸದೆ ಮನೆಯಲ್ಲೇ ಉಳಿಯುವಂತೆ ಮಾಡಿದೆ. ಈ ಬಗ್ಗೆ ಪ್ರಶ್ನಿಸುವುದರಲ್ಲಿ ತಪ್ಪೇನು? ಸರ್ಕಾರಿ ಅಧಿಕಾರಿಯನ್ನು ವರ್ಗ ಮಾಡುವ ಅಧಿಕಾರ ಸರ್ಕಾರಕ್ಕೆ ಇದ್ದ ಮೇಲೆ, ಪರ್ಯಾಯ ಸ್ಥಳ ನೀಡಬೇಕಾದ ಜವಾಬ್ದಾರಿಯೂ ಇದೆಯಲ್ಲವೇ? ಸರ್ಕಾರ ಈ ವಿಷಯದಲ್ಲಿ<br />ಎಡವಿದೆ’ ಎಂದು ವಿಶ್ವನಾಥ್ ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>