<p><strong>ಹುಣಸೂರು</strong>: 66ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಅರಣ್ಯದಲ್ಲಿ ತ್ಯಾಜ್ಯ ವಿಲೇವಾರಿ ಮಾಡದಂತೆ ಆನೆಚೌಕೂರು ವಲಯದ ಆದಿವಾಸಿ ಗಿರಿಜನರಿಂದ ಪ್ರಜ್ಞಾವಂತ ನಾಗರಿಕರಿಗೆ ಅರಿವು ಮೂಡಿಸುವ ವಿನೂತನ ಜಾಗೃತಿ ಕಾರ್ಯಕ್ರಮ ನಡೆಯಿತು.</p>.<p>ಆನೆಚೌಕೂರು ವಲಯಕ್ಕೆ ಸೇರಿದ ಕಾರ್ಯಕಂಡಿ ಹಾಡಿ ಮತ್ತು ಮಜ್ಜಿಗೆಹಳ್ಳ ಹಾಡಿ ಆದಿವಾಸಿ ಗಿರಿಜನರು ಮತ್ತು ಆನೆ ಕ್ಯಾಂಪ್ ಸಿಬ್ಬಂದಿ ಸೇರಿದಂತೆ ಅರಣ್ಯದೊಳಗೆ ಹಾದು ಹೋಗುವ ವಾಹನದಿಂದ ಪ್ಲಾಸ್ಟಿಕ್ ತ್ಯಾಜ್ಯವನ್ನು ಹಾಕದಂತೆ ಪ್ರಯಾಣಿಕರಿಗೆ ಮನವರಿಕೆ ಮಾಡಿಕೊಡಲಾಯಿತು.</p>.<p>ಕೊಡಗು ಮತ್ತು ಕೇರಳಕ್ಕೆ ತೆರಳುವ ಪ್ರಯಾಣಿಕರು ಅರಣ್ಯಪ್ರದೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಮಾಡುವುದರಿಂದ ವನ್ಯಪ್ರಾಣಿಗಳ ಜೀವಕ್ಕೆ ಕುತ್ತು ಬರಲಿದೆ. ಪ್ಲಾಸ್ಟಿಕ್ ತ್ಯಾಜ್ಯ ಗಾಜಿನ ಬಾಟಲ್ ಅರಣ್ಯದಲ್ಲಿ ಹಾಕುವುದರಿಂದ ಮೂಕಪ್ರಾಣಿಗಳಿಗೆ ಸಮಸ್ಯೆ ಎದುರಾಗಲಿದ್ದು, ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ಪೂರಕವಾಗಿ ಸ್ಪಂದಿಸುವಂತೆ ಮನವಿ ಮಾಡಿದರು.</p>.<p>ಆನೆಚೌಕೂರು ವಲಯದ ಅಧಿಕಾರಿ ಕಿರಣ್ಕುಮಾರ್ ಮಾತನಾಡಿ, ‘ರಾಜ್ಯ ಹೆದ್ದಾರಿಯಲ್ಲಿರುವ ನಾಗರಹೊಳೆ ಅರಣ್ಯದ ಆನೆಚೌಕೂರು ವಲಯದಲ್ಲಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದು, ಪ್ರಯಾಣಿಕರು ತ್ಯಾಜ್ಯ ತಂದು ಅರಣ್ಯದಲ್ಲಿ ವಿಲೇವಾರಿ ಮಾಡುವ ಹೀನ ಕೆಲಸ ಮಾಡುತ್ತಿದ್ದಾರೆ. ಈ ಸಂಬಂಧ ಇಲಾಖೆ ವಿವಿಧ ರೀತಿ ಜಾಗೃತಿ ಮೂಡಿಸುತ್ತಿದೆ. ಇದಲ್ಲದೆ ತ್ಯಾಜ್ಯ ಸಂಗ್ರಹವನ್ನು ಪ್ರತಿ 15 ದಿನಕ್ಕೊಮ್ಮೆ ರಾಜ್ಯ ಹೆದ್ದಾರಿ ಅಂಚಿನಲ್ಲಿ ಸಂಗ್ರಹಿಸಿ ವಿಲೇವಾರಿ ಮಾಡುತ್ತಿದ್ದೇವೆ’ ಎಂದು ಹೇಳಿದರು.</p>.<p>ಕೊಡಗಿನಲ್ಲಿ ಕಸ ವಿಲೇವಾರಿ ಮಾಡುವುದು ದೊಡ್ಡ ಸಮಸ್ಯೆ ಆಗಿದ್ದು, ನಿಗದಿತ ಸ್ಥಳವಿಲ್ಲದೆ ನಾಗರಿಕರು ಕಾಡಂಚಿನಲ್ಲಿ ವಿಲೇವಾರಿ ಮಾಡುತ್ತಿದ್ದಾರೆ. ಇದಲ್ಲದೆ ವಾಹನದಲ್ಲಿ ಓಡಾಡುವ ನೆಪದಲ್ಲೂ ಅರಣ್ಯದಲ್ಲಿ ವಿಲೇವಾರಿ ನಡೆದಿದೆ. ಈ ಸಂಬಂಧ ಕೊಡಗು ಜಿಲ್ಲಾಡಳಿತ ಕಠಿಣ ಕ್ರಮ ತೆಗೆದುಕೊಂಡಲ್ಲಿ ಅರಣ್ಯದ ಮೇಲಿನ ತ್ಯಾಜ್ಯದ ಒತ್ತಡ ಸುಧಾರಿಸಬಹುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: 66ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಅರಣ್ಯದಲ್ಲಿ ತ್ಯಾಜ್ಯ ವಿಲೇವಾರಿ ಮಾಡದಂತೆ ಆನೆಚೌಕೂರು ವಲಯದ ಆದಿವಾಸಿ ಗಿರಿಜನರಿಂದ ಪ್ರಜ್ಞಾವಂತ ನಾಗರಿಕರಿಗೆ ಅರಿವು ಮೂಡಿಸುವ ವಿನೂತನ ಜಾಗೃತಿ ಕಾರ್ಯಕ್ರಮ ನಡೆಯಿತು.</p>.<p>ಆನೆಚೌಕೂರು ವಲಯಕ್ಕೆ ಸೇರಿದ ಕಾರ್ಯಕಂಡಿ ಹಾಡಿ ಮತ್ತು ಮಜ್ಜಿಗೆಹಳ್ಳ ಹಾಡಿ ಆದಿವಾಸಿ ಗಿರಿಜನರು ಮತ್ತು ಆನೆ ಕ್ಯಾಂಪ್ ಸಿಬ್ಬಂದಿ ಸೇರಿದಂತೆ ಅರಣ್ಯದೊಳಗೆ ಹಾದು ಹೋಗುವ ವಾಹನದಿಂದ ಪ್ಲಾಸ್ಟಿಕ್ ತ್ಯಾಜ್ಯವನ್ನು ಹಾಕದಂತೆ ಪ್ರಯಾಣಿಕರಿಗೆ ಮನವರಿಕೆ ಮಾಡಿಕೊಡಲಾಯಿತು.</p>.<p>ಕೊಡಗು ಮತ್ತು ಕೇರಳಕ್ಕೆ ತೆರಳುವ ಪ್ರಯಾಣಿಕರು ಅರಣ್ಯಪ್ರದೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಮಾಡುವುದರಿಂದ ವನ್ಯಪ್ರಾಣಿಗಳ ಜೀವಕ್ಕೆ ಕುತ್ತು ಬರಲಿದೆ. ಪ್ಲಾಸ್ಟಿಕ್ ತ್ಯಾಜ್ಯ ಗಾಜಿನ ಬಾಟಲ್ ಅರಣ್ಯದಲ್ಲಿ ಹಾಕುವುದರಿಂದ ಮೂಕಪ್ರಾಣಿಗಳಿಗೆ ಸಮಸ್ಯೆ ಎದುರಾಗಲಿದ್ದು, ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ಪೂರಕವಾಗಿ ಸ್ಪಂದಿಸುವಂತೆ ಮನವಿ ಮಾಡಿದರು.</p>.<p>ಆನೆಚೌಕೂರು ವಲಯದ ಅಧಿಕಾರಿ ಕಿರಣ್ಕುಮಾರ್ ಮಾತನಾಡಿ, ‘ರಾಜ್ಯ ಹೆದ್ದಾರಿಯಲ್ಲಿರುವ ನಾಗರಹೊಳೆ ಅರಣ್ಯದ ಆನೆಚೌಕೂರು ವಲಯದಲ್ಲಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದು, ಪ್ರಯಾಣಿಕರು ತ್ಯಾಜ್ಯ ತಂದು ಅರಣ್ಯದಲ್ಲಿ ವಿಲೇವಾರಿ ಮಾಡುವ ಹೀನ ಕೆಲಸ ಮಾಡುತ್ತಿದ್ದಾರೆ. ಈ ಸಂಬಂಧ ಇಲಾಖೆ ವಿವಿಧ ರೀತಿ ಜಾಗೃತಿ ಮೂಡಿಸುತ್ತಿದೆ. ಇದಲ್ಲದೆ ತ್ಯಾಜ್ಯ ಸಂಗ್ರಹವನ್ನು ಪ್ರತಿ 15 ದಿನಕ್ಕೊಮ್ಮೆ ರಾಜ್ಯ ಹೆದ್ದಾರಿ ಅಂಚಿನಲ್ಲಿ ಸಂಗ್ರಹಿಸಿ ವಿಲೇವಾರಿ ಮಾಡುತ್ತಿದ್ದೇವೆ’ ಎಂದು ಹೇಳಿದರು.</p>.<p>ಕೊಡಗಿನಲ್ಲಿ ಕಸ ವಿಲೇವಾರಿ ಮಾಡುವುದು ದೊಡ್ಡ ಸಮಸ್ಯೆ ಆಗಿದ್ದು, ನಿಗದಿತ ಸ್ಥಳವಿಲ್ಲದೆ ನಾಗರಿಕರು ಕಾಡಂಚಿನಲ್ಲಿ ವಿಲೇವಾರಿ ಮಾಡುತ್ತಿದ್ದಾರೆ. ಇದಲ್ಲದೆ ವಾಹನದಲ್ಲಿ ಓಡಾಡುವ ನೆಪದಲ್ಲೂ ಅರಣ್ಯದಲ್ಲಿ ವಿಲೇವಾರಿ ನಡೆದಿದೆ. ಈ ಸಂಬಂಧ ಕೊಡಗು ಜಿಲ್ಲಾಡಳಿತ ಕಠಿಣ ಕ್ರಮ ತೆಗೆದುಕೊಂಡಲ್ಲಿ ಅರಣ್ಯದ ಮೇಲಿನ ತ್ಯಾಜ್ಯದ ಒತ್ತಡ ಸುಧಾರಿಸಬಹುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>