ಆನೆಚೌಕೂರು ವಲಯದ ಅಧಿಕಾರಿ ಕಿರಣ್ಕುಮಾರ್ ಮಾತನಾಡಿ, ‘ರಾಜ್ಯ ಹೆದ್ದಾರಿಯಲ್ಲಿರುವ ನಾಗರಹೊಳೆ ಅರಣ್ಯದ ಆನೆಚೌಕೂರು ವಲಯದಲ್ಲಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದು, ಪ್ರಯಾಣಿಕರು ತ್ಯಾಜ್ಯ ತಂದು ಅರಣ್ಯದಲ್ಲಿ ವಿಲೇವಾರಿ ಮಾಡುವ ಹೀನ ಕೆಲಸ ಮಾಡುತ್ತಿದ್ದಾರೆ. ಈ ಸಂಬಂಧ ಇಲಾಖೆ ವಿವಿಧ ರೀತಿ ಜಾಗೃತಿ ಮೂಡಿಸುತ್ತಿದೆ. ಇದಲ್ಲದೆ ತ್ಯಾಜ್ಯ ಸಂಗ್ರಹವನ್ನು ಪ್ರತಿ 15 ದಿನಕ್ಕೊಮ್ಮೆ ರಾಜ್ಯ ಹೆದ್ದಾರಿ ಅಂಚಿನಲ್ಲಿ ಸಂಗ್ರಹಿಸಿ ವಿಲೇವಾರಿ ಮಾಡುತ್ತಿದ್ದೇವೆ’ ಎಂದು ಹೇಳಿದರು.