<p><strong>ಮೈಸೂರು:</strong> ದೇಶದಲ್ಲಿ ಮುಸ್ಲಿಮರಿಗೆ ಹೋಲಿಸಿದಲ್ಲಿ ಹಿಂದೂಗಳಿಗೆ ಕಡಿಮೆ ಸೌಲಭ್ಯ ಸಿಗುತ್ತಿದ್ದು, ಸಮಾನತೆಯ ಆಧಾರದ ಮೇಲೆ ಸೌಲಭ್ಯಗಳು ಸಿಗಬೇಕು ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಒತ್ತಾಯಿಸಿದರು.</p>.<p>ಎಲ್ಲ ಧರ್ಮದವರಿಗೂ ಸಮಾನ ಸೌಲಭ್ಯ ಸಿಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಅವರು ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.</p>.<p>ದೇಶದಲ್ಲಿ ಈ ಕೂಡಲೇ ಗೋಹತ್ಯೆ ಸಂಪೂರ್ಣ ನಿಷೇಧವಾಗಬೇಕು. ರಾಮಮಂದಿರ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.</p>.<p>‘ಗೋಡ್ಸೆ ಪರವಕಾಲತ್ತು ವಹಿಸಿದ ಸಾಧ್ವಿ ಪ್ರಗ್ಯಾ ಸಿಂಗ್ ಚುನಾವಣೆಯಲ್ಲಿ ಗೆದ್ದದ್ದು ನನಗೆ ಅಸಮಾಧಾನ ತಂದಿದೆ. ಅಂಥವರು ಗೆಲ್ಲಬಾರದಿತ್ತು. ಹಿಂದೂ– ಮುಸ್ಲಿಮರ ಭಾವನೆಗಳಿಗೆ ಧಕ್ಕೆ ಆಗದಂತೆ ಸೌಹಾರ್ದತೆಯಿಂದ ಈ ದೇಶದ ಸಮಸ್ಯೆಗಳನ್ನು ಬಗೆಹರಿಸಬೇಕು. ಕಾಶ್ಮೀರದ ಸಮಸ್ಯೆಗಳೂ ಇದು ಅನ್ವಯವಾಗಬೇಕು’ ಎಂದು ಕೋರಿದರು.</p>.<p>‘ಮೂರೂ ಪಕ್ಷಗಳು ಮೈತ್ರಿ ಮಾಡಬೇಕಿತ್ತು. ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ಮಾಡಬೇಕಿತ್ತು. ಈ ಬಗ್ಗೆ ಮುಂಚೆಯೂ ಸಲಹೆ ನೀಡಿದ್ದೆ. ಆದರೆ, ನನ್ನ ಸಲಹೆಗೆ ಮಾನ್ಯತೆ ನೀಡದೇ ಕಾಂಗ್ರೆಸ್ – ಜೆಡಿಎಸ್ ಮಾತ್ರ ಒಂದಾದವು. ಮೂರೂ ಪಕ್ಷಗಳು ಒಂದಾಗಿದ್ದರೆ ಅಭಿವೃದ್ಧಿ ಉತ್ತಮವಾಗಿರುತ್ತಿತ್ತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ದೇಶದಲ್ಲಿ ಮುಸ್ಲಿಮರಿಗೆ ಹೋಲಿಸಿದಲ್ಲಿ ಹಿಂದೂಗಳಿಗೆ ಕಡಿಮೆ ಸೌಲಭ್ಯ ಸಿಗುತ್ತಿದ್ದು, ಸಮಾನತೆಯ ಆಧಾರದ ಮೇಲೆ ಸೌಲಭ್ಯಗಳು ಸಿಗಬೇಕು ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಒತ್ತಾಯಿಸಿದರು.</p>.<p>ಎಲ್ಲ ಧರ್ಮದವರಿಗೂ ಸಮಾನ ಸೌಲಭ್ಯ ಸಿಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಅವರು ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.</p>.<p>ದೇಶದಲ್ಲಿ ಈ ಕೂಡಲೇ ಗೋಹತ್ಯೆ ಸಂಪೂರ್ಣ ನಿಷೇಧವಾಗಬೇಕು. ರಾಮಮಂದಿರ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.</p>.<p>‘ಗೋಡ್ಸೆ ಪರವಕಾಲತ್ತು ವಹಿಸಿದ ಸಾಧ್ವಿ ಪ್ರಗ್ಯಾ ಸಿಂಗ್ ಚುನಾವಣೆಯಲ್ಲಿ ಗೆದ್ದದ್ದು ನನಗೆ ಅಸಮಾಧಾನ ತಂದಿದೆ. ಅಂಥವರು ಗೆಲ್ಲಬಾರದಿತ್ತು. ಹಿಂದೂ– ಮುಸ್ಲಿಮರ ಭಾವನೆಗಳಿಗೆ ಧಕ್ಕೆ ಆಗದಂತೆ ಸೌಹಾರ್ದತೆಯಿಂದ ಈ ದೇಶದ ಸಮಸ್ಯೆಗಳನ್ನು ಬಗೆಹರಿಸಬೇಕು. ಕಾಶ್ಮೀರದ ಸಮಸ್ಯೆಗಳೂ ಇದು ಅನ್ವಯವಾಗಬೇಕು’ ಎಂದು ಕೋರಿದರು.</p>.<p>‘ಮೂರೂ ಪಕ್ಷಗಳು ಮೈತ್ರಿ ಮಾಡಬೇಕಿತ್ತು. ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ಮಾಡಬೇಕಿತ್ತು. ಈ ಬಗ್ಗೆ ಮುಂಚೆಯೂ ಸಲಹೆ ನೀಡಿದ್ದೆ. ಆದರೆ, ನನ್ನ ಸಲಹೆಗೆ ಮಾನ್ಯತೆ ನೀಡದೇ ಕಾಂಗ್ರೆಸ್ – ಜೆಡಿಎಸ್ ಮಾತ್ರ ಒಂದಾದವು. ಮೂರೂ ಪಕ್ಷಗಳು ಒಂದಾಗಿದ್ದರೆ ಅಭಿವೃದ್ಧಿ ಉತ್ತಮವಾಗಿರುತ್ತಿತ್ತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>