ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ, ಕೊಡಗು ಜಿಲ್ಲೆಗಳಲ್ಲಿ ಕಡಿಮೆ ಸಂಖ್ಯೆಯ ಮೌಲ್ಯಮಾಪಕರಿದ್ದು, ಹೆಚ್ಚಿನವರು ಮಹಿಳಾ ಶಿಕ್ಷಕರೇ ಆಗಿದ್ದಾರೆ. ಕೋವಿಡ್ನ ಈ ವಿಷಮ ಪರಿಸ್ಥಿತಿಯಲ್ಲಿ 10 ದಿನ ಬೆಂಗಳೂರು, ಮಂಗಳೂರಿನ ಕೇಂದ್ರಗಳಲ್ಲಿ ನಡೆಯಲಿರುವ ಮೌಲ್ಯಮಾಪನಕ್ಕೆ ಹಾಜರಾಗಲು ಸಾಧ್ಯವಿಲ್ಲದವರಿಗೆ ಕಡ್ಡಾಯವಾಗಿ ವಿನಾಯಿತಿ ನೀಡಬೇಕು ಎಂದು ಮರಿತಿಬ್ಬೇಗೌಡ ಪತ್ರದಲ್ಲಿ ಒತ್ತಾಯಿಸಿದ್ದಾರೆ.