‘ಪಟ್ಟಣದ ಹೊರವಲಯದಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಹೊರ ಜಿಲ್ಲೆ, ತಾಲ್ಲೂಕುಗಳಿಗೆ ಜಲ್ಲಿಕಲ್ಲು, ಪುಡಿಯನ್ನು ಯಥೇಚ್ಛವಾಗಿ ಸಾಗಣೆಯಾಗುತ್ತಿರುವುದರಿಂದ ಕ್ರಷರ್ ಮಾಲೀಕರು, ಲಾರಿ ಮತ್ತು ಟ್ರಾಕ್ಟರ್ ಚಾಲಕರು ನಿಬಂಧನೆಗಳನ್ನು ಮತ್ತು ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.