‘ಈ ಸರ್ಕಾರದಲ್ಲಿ ಯಾವೊಬ್ಬ ಸಚಿವ, ಉನ್ನತ ಅಧಿಕಾರಿ, ಸ್ವತಃ ಯಡಿಯೂರಪ್ಪ ಬಳಿಗೆ ಹೋದರೂ ಏನೊಂದು ಕೆಲಸ ಆಗಲ್ಲ. ಕುಟುಂಬದವರ ಮೂಲಕ ವಿಜಯೇಂದ್ರ ಬಳಿಗೆ ಹೋದರೆ ಮಾತ್ರ ಅನುದಾನ ಬಿಡುಗಡೆಯಾಗಲಿದೆ. ಇದಕ್ಕಾಗಿಯೇ ಅಧಿಕಾರಿಗಳು, ಸಚಿವರು, ಮುಖ್ಯಮಂತ್ರಿ ಗೃಹ ಕಚೇರಿ ಬದಲು; ವಿಜಯೇಂದ್ರ ಫ್ಲಾಟ್ ಮುಂಭಾಗ ಕೈಕಟ್ಟಿಕೊಂಡು ನಿಲ್ಲುತ್ತಿದ್ದಾರೆ. ಪೊಲೀಸರು ಅಲ್ಲಿಗೆ ಹೆಚ್ಚಿನ ರಕ್ಷಣೆ ನೀಡಿದ್ದಾರೆ’ ಎಂದು ಶಾಸಕರು ಹರಿಹಾಯ್ದರು.