ಗುತ್ತಿಗೆ ಕಾರ್ಮಿಕರ ಕನಿಷ್ಠ ವೇತನವನ್ನು ₹ 21 ಸಾವಿರಕ್ಕೆ ಹೆಚ್ಚಿಸಬೇಕು, ಕೊರೊನಾದಂತಹ ಸಂದರ್ಭದಲ್ಲಿ ಈ ಕಾರ್ಮಿಕರನ್ನು ಮಾನವೀಯತೆಯ ಆಧಾರದ ಮೇಲೆ ಪರಿಗಣಿಸಿ ಕೆಲಸ ನೀಡಬೇಕು, ಗುತ್ತಿಗೆದಾರರಿಂದ ಆಗುವ ಶೋಷಣೆ ನಿಲ್ಲಿಸಬೇಕು, ಖಾಸಗೀಕರಣಕ್ಕೆ ದಾರಿ ಮಾಡಿಕೊಡುವ ವಿದ್ಯುತ್ ಕಾಯ್ದೆ 2020ನ್ನು ತಿದ್ದುಪಡಿ ಮಾಡಬಾರದು ಎಂದು ಆಗ್ರಹಿಸಿದರು.