<p><strong>ಮೈಸೂರು: </strong>ತರಕಾರಿ ಸಾಗಣೆ ಮಾಡು ತ್ತಿದ್ದ 2 ಲಾರಿಗಳನ್ನು ವಶಪಡಿಸಿಕೊಂಡ ಆರ್ಟಿಒ ಅಧಿಕಾರಿಗಳ ವಿರುದ್ಧ ರೈತರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ನೇತೃತ್ವದಲ್ಲಿ ಇಲ್ಲಿನ ಆರ್ಟಿಒ ಕಚೇರಿ ಮುಂಭಾಗ ಸೇರಿದ ರೈತರು ಅಧಿಕಾರಿಗಳ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಗುಂಡ್ಲುಪೇಟೆಯಿಂದ ಮೈಸೂರಿಗೆ ಹಾಗೂ ಮೈಸೂರಿನಿಂದ ಕೇರಳಕ್ಕೆ ತರಕಾರಿಗಳನ್ನು ಕೊಂಡೊಯ್ಯುತ್ತಿದ್ದ 2 ಲಾರಿಗಳನ್ನು ನಿಯಮ ಉಲ್ಲಂಘನೆಯ ಆರೋಪ ಹೊರಿಸಿ ದೊಡ್ಡ ಪ್ರಮಾಣದ ದಂಡ ವಿಧಿಸಿದರೆ ಚಾಲಕರು ಹಣ ಎಲ್ಲಿಂದ ತರಬೇಕು ಎಂದು ರೈತರು ಪ್ರಶ್ನಿಸಿದರು.</p>.<p>ದಂಡ ವಿಧಿಸಿದ ನಂತರ ಅದರ ಪಾವತಿಗೆ ಕಾಲಾವಕಾಶ ಕೊಟ್ಟು ಕಳುಹಿಸಿದ್ದರೆ ರೈತರು ಶ್ರಮ ವಹಿಸಿ ಬೆಳೆದಿದ್ದ ತರಕಾರಿಗಳು ಉಳಿಯುತ್ತಿದ್ದವು. ಈಗ ವಶಪಡಿಸಿಕೊಂಡ ಕಾರಣದಿಂದಾಗಿ ತರಕಾರಿಗಳು ಒಂದು ರಾತ್ರಿ ಲಾರಿಯಲ್ಲೇ ಇದ್ದು ಗುಣಮಟ್ಟ ಕಳೆದುಕೊಂಡಿವೆ. ಇದರ ನಷ್ಟವನ್ನು ಅಧಿಕಾರಿಗಳು ಭರಿಸಬೇಕು ಎಂದು ಆಗ್ರಹಿಸಿದರು.</p>.<p>ಸ್ಥಳಕ್ಕೆ ಬಂದ ಅಧಿಕಾರಿಗಳು ಇನ್ನು ಮುಂದೆ ಹೀಗಾಗದಂತೆ ಎಚ್ಚರ ವಹಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ವಾಪಸ್ ಪಡೆಯಲಾಯಿತು.</p>.<p>ಸಂಘಟನೆಯ ಅಧ್ಯಕ್ಷ ಮರಂಕಯ್ಯ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಮುಖಂಡರಾದ ಮಂಡಕಳ್ಳಿ ಮಹೇಶ್, ಚಂದ್ರೇಗೌಡ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ತರಕಾರಿ ಸಾಗಣೆ ಮಾಡು ತ್ತಿದ್ದ 2 ಲಾರಿಗಳನ್ನು ವಶಪಡಿಸಿಕೊಂಡ ಆರ್ಟಿಒ ಅಧಿಕಾರಿಗಳ ವಿರುದ್ಧ ರೈತರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ನೇತೃತ್ವದಲ್ಲಿ ಇಲ್ಲಿನ ಆರ್ಟಿಒ ಕಚೇರಿ ಮುಂಭಾಗ ಸೇರಿದ ರೈತರು ಅಧಿಕಾರಿಗಳ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಗುಂಡ್ಲುಪೇಟೆಯಿಂದ ಮೈಸೂರಿಗೆ ಹಾಗೂ ಮೈಸೂರಿನಿಂದ ಕೇರಳಕ್ಕೆ ತರಕಾರಿಗಳನ್ನು ಕೊಂಡೊಯ್ಯುತ್ತಿದ್ದ 2 ಲಾರಿಗಳನ್ನು ನಿಯಮ ಉಲ್ಲಂಘನೆಯ ಆರೋಪ ಹೊರಿಸಿ ದೊಡ್ಡ ಪ್ರಮಾಣದ ದಂಡ ವಿಧಿಸಿದರೆ ಚಾಲಕರು ಹಣ ಎಲ್ಲಿಂದ ತರಬೇಕು ಎಂದು ರೈತರು ಪ್ರಶ್ನಿಸಿದರು.</p>.<p>ದಂಡ ವಿಧಿಸಿದ ನಂತರ ಅದರ ಪಾವತಿಗೆ ಕಾಲಾವಕಾಶ ಕೊಟ್ಟು ಕಳುಹಿಸಿದ್ದರೆ ರೈತರು ಶ್ರಮ ವಹಿಸಿ ಬೆಳೆದಿದ್ದ ತರಕಾರಿಗಳು ಉಳಿಯುತ್ತಿದ್ದವು. ಈಗ ವಶಪಡಿಸಿಕೊಂಡ ಕಾರಣದಿಂದಾಗಿ ತರಕಾರಿಗಳು ಒಂದು ರಾತ್ರಿ ಲಾರಿಯಲ್ಲೇ ಇದ್ದು ಗುಣಮಟ್ಟ ಕಳೆದುಕೊಂಡಿವೆ. ಇದರ ನಷ್ಟವನ್ನು ಅಧಿಕಾರಿಗಳು ಭರಿಸಬೇಕು ಎಂದು ಆಗ್ರಹಿಸಿದರು.</p>.<p>ಸ್ಥಳಕ್ಕೆ ಬಂದ ಅಧಿಕಾರಿಗಳು ಇನ್ನು ಮುಂದೆ ಹೀಗಾಗದಂತೆ ಎಚ್ಚರ ವಹಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ವಾಪಸ್ ಪಡೆಯಲಾಯಿತು.</p>.<p>ಸಂಘಟನೆಯ ಅಧ್ಯಕ್ಷ ಮರಂಕಯ್ಯ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಮುಖಂಡರಾದ ಮಂಡಕಳ್ಳಿ ಮಹೇಶ್, ಚಂದ್ರೇಗೌಡ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>