ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌಲಭ್ಯ ದೊರಕುತ್ತಿಲ್ಲ: ಮೈಸೂರಿನಲ್ಲಿ ಬಿ.ಸಿ.ಪಾಟೀಲ ಭಾಷಣದ ವೇಳೆ ರೈತರ ಆಕ್ರೋಶ

Last Updated 22 ಏಪ್ರಿಲ್ 2022, 10:58 IST
ಅಕ್ಷರ ಗಾತ್ರ

ಮೈಸೂರು: ತಾಲ್ಲೂಕಿನ ತಳೂರು ಗ್ರಾಮದಲ್ಲಿ ಶುಕ್ರವಾರ ನಡೆದ ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಸಚಿವ ಬಿ.ಸಿ.ಪಾಟೀಲ ಅವರು ಮಾತನಾಡುತ್ತಿದ್ದಾಗ ರೈತರೊಬ್ಬರು ಎದ್ದು ನಿಂತು ನಿಜವಾದ ರೈತರಿಗೆ ಏನೂ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನೊಬ್ಬ ಪ್ರಗತಿಪರ ರೈತ. ಯಾವುದೇ ಸೌಲಭ್ಯ ನೀಡಿಲ್ಲ. ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ ಎಂದು ಕಿಡಿಕಾರಿದರು.

ಬಿ.ಸಿ.ಪಾಟೀಲ ಪ್ರತಿಕ್ರಿಯಿಸಿ, ಎಲ್ಲರ ಕರೆಯನ್ನು ಸ್ವೀಕರಿಸಲು ಆಗುವುದಿಲ್ಲ. ಅಧಿಕಾರಿಗಳಿಗೆ ಹೇಳಿ. ಈಗ ನಿಮ್ಮ ದೂರನ್ನೂ ಆಲಿಸುತ್ತೇನೆ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT