ಮೈಸೂರು: ತಾಲ್ಲೂಕಿನ ತಳೂರು ಗ್ರಾಮದಲ್ಲಿ ಶುಕ್ರವಾರ ನಡೆದ ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಸಚಿವ ಬಿ.ಸಿ.ಪಾಟೀಲ ಅವರು ಮಾತನಾಡುತ್ತಿದ್ದಾಗ ರೈತರೊಬ್ಬರು ಎದ್ದು ನಿಂತು ನಿಜವಾದ ರೈತರಿಗೆ ಏನೂ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನೊಬ್ಬ ಪ್ರಗತಿಪರ ರೈತ. ಯಾವುದೇ ಸೌಲಭ್ಯ ನೀಡಿಲ್ಲ. ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ ಎಂದು ಕಿಡಿಕಾರಿದರು.
ಬಿ.ಸಿ.ಪಾಟೀಲ ಪ್ರತಿಕ್ರಿಯಿಸಿ, ಎಲ್ಲರ ಕರೆಯನ್ನು ಸ್ವೀಕರಿಸಲು ಆಗುವುದಿಲ್ಲ. ಅಧಿಕಾರಿಗಳಿಗೆ ಹೇಳಿ. ಈಗ ನಿಮ್ಮ ದೂರನ್ನೂ ಆಲಿಸುತ್ತೇನೆ ಎಂದು ಭರವಸೆ ನೀಡಿದರು.