ಇದಕ್ಕೂ ಮುನ್ನ ಜೂನ್ ತಿಂಗಳಿನಲ್ಲಿ ಮೈದುನಹಳ್ಳಿಯಲ್ಲಿರುವ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿದ್ದರು. ರಿಯಲ್ ಎಸ್ಟೇಟ್ ಲಾಬಿಯಿಂದಾಗಿ ರೈತರ ಜಮೀನಿನ ಮೇಲೆ ಲೈನ್ ಎಳೆಯಲಾಗುತ್ತಿದೆ. ಇದನ್ನು ಬಿಟ್ಟು ನಿವೇಶನಗಳಾಗಿರುವ ಕಡೆ ಅತ್ಯಂತ ಕಡಿಮೆ ದೂರದಲ್ಲಿ ಲೈನ್ ಎಳೆಯಬಹುದು ಎಂದು ರೈತರು ಹೇಳಿದ್ದರು.