ಭತ್ತ ಮತ್ತು ರಾಗಿಯ ಬೆಂಬಲ ಬೆಲೆ ಬಾಕಿಯನ್ನು ಕೂಡಲೇ ಪಾವತಿಸಬೇಕು, ಭತ್ತ ಖರೀದಿ ಕೇಂದ್ರಗಳನ್ನು ಕೂಡಲೇ ತೆರೆಯಬೇಕು ಎಂದು ಒತ್ತಾಯಿಸಿದ ಅವರು, ಇಂಧನ ದರ ಇಳಿಕೆ ಮಾಡಬೇಕು, ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಬೇಕು, ಬಂಡವಾಳಶಾಹಿಗಳಿಂದ ವಂಚಿತರಾಗಿರುವ ಮೈಸೂರು ತಾಲ್ಲೂಕಿನ ಕೋಚನಹಳ್ಳಿ ರೈತರಿಗೆ ಸರ್ಕಾರ ನ್ಯಾಯ ದೊರಕಿಸಿಕೊಡಬೇಕು ಎಂದು ಹೇಳಿದರು.